ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ರೈಲ್ವೆ ಹಳಿ ಮೇಲೆ ಪತ್ರಕರ್ತನ ಶವ ಪತ್ತೆ, ಮಹಿಳಾ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲು

ಉತ್ತರ ಪ್ರದೇಶದ ಉನ್ನಾವೊದಲ್ಲಿ ರೈಲು ಹಳಿಯ ಮೇಲೆ ಸ್ಥಳೀಯ ಹಿಂದಿ ದಿನಪತ್ರಿಕೆಗಾಗಿ ಕೆಲಸ ಮಾಡುತ್ತಿದ್ದ 22 ವರ್ಷದ ಪತ್ರಕರ್ತ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಉನ್ನಾವೊ: ಉತ್ತರ ಪ್ರದೇಶದ ಉನ್ನಾವೊದಲ್ಲಿ ರೈಲು ಹಳಿಯ ಮೇಲೆ ಸ್ಥಳೀಯ ಹಿಂದಿ ದಿನಪತ್ರಿಕೆಗಾಗಿ ಕೆಲಸ ಮಾಡುತ್ತಿದ್ದ 22 ವರ್ಷದ ಪತ್ರಕರ್ತ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಘಟನೆಯ ಹಿಂದೆ ಸಬ್ ಇನ್ಸ್‌ಪೆಕ್ಟರ್ ಸುನೀತಾ ಚೌರಾಸಿಯಾ ಅವರ ಕೈವಾಡ ಇದೆ ಪತ್ರಕರ್ತನ ಕುಟುಂಬ ಆರೋಪಿಸಿದ ನಂತರ ಪೊಲೀಸರು, ಸಬ್ ಇನ್ಸ್‌ಪೆಕ್ಟರ್ ಸುನೀತಾ ಹಾಗೂ ಕಾನ್‌ಸ್ಟೆಬಲ್ ಅಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ(ನಗರ) ಗೌರವ್ ತ್ರಿಪಾಠಿ ಅವರು ಹೇಳಿದ್ದಾರೆ.

ಪತ್ರಕರ್ತ ಸೂರಜ್ ಪಾಂಡೆ ಅವರನ್ನು ಗುರುವಾರ ಸಂಜೆ ಕೊಲೆ ಮಾಡಿ, ಸದರ್ ಕೊಟ್ವಾಲಿ ಪ್ರದೇಶದ ರೈಲ್ವೆ ಹಳಿ ಮೇಲೆ ಶವವನ್ನು ಎಸೆಯಲಾಗಿದೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಸೂರಜ್ ಮತ್ತು ಪೊಲೀಸ್ ಅಧಿಕಾರಿ ಸುನೀತಾ ಇಬ್ಬರು ಸ್ನೇಹಿತರಾಗಿದ್ದರು ಮತ್ತು ಈ ಕಾರಣದಿಂದಾಗಿ ನವೆಂಬರ್ 11 ರಂದು ಕಾನ್‌ಸ್ಟೆಬಲ್ ಅಮರ್ ಸಿಂಗ್ ಅವರು ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದರು ಎಂದು ಪತ್ರಕರ್ತನ ತಾಯಿ ಲಕ್ಷ್ಮಿ ಪಾಂಡೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ಸೂರಜ್, ಫೋನ್ ಕರೆಯೊಂದು ಬಂದ ನಂತರ ಮನೆಯಿಂದ ತೆರಳಿದ್ದರು. ಬಳಿಕ ರೈಲ್ವೆ ಹಳಿ ಮೇಲೆ ಆತನ ಶವ ಪತ್ತೆಯಾಗಿದೆ ಎಂದು ಲಕ್ಷ್ಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT