ವಿಕಾಸ್ ದುಬೆ 
ದೇಶ

ಕುಖ್ಯಾತ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್'ಕೌಂಟರ್ ಪ್ರಕರಣ: ಐಪಿಎಸ್ ಅಧಿಕಾರಿ ಅಮಾನತು

ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. 

ಕಾನ್ಪುರ: ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. 

ಜುಲೈ 3 ರಂದು ಕಾನ್ಪುರದ ಚೌಬೆಪುರ್ ಪ್ರದೇಶದ ಬಿಕ್ರು ಗ್ರಾಮದಲ್ಲಿ ಗ್ಯಾಂಗ್‌ಸ್ಟರ್‌ ದುಬೆ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರ ಪೈಕಿ ಎಂಟು ಮಂದಿ ಹತರಾಗಿದ್ದರು. ಜುಲೈ 10 ರಂದು ನಡೆದ ಎನ್‌ಕೌಂಟರ್‌ನಲ್ಲಿ ದುಬೆ ಹತನಾದ.

 ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ದುಬೆಗೆ ನೆರವಾಗಿದ್ದರು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಎಸ್‌ಐಟಿ ತಂಡ ತನಿಖೆ ಆರಂಭಿಸಿತ್ತು. ಅಲ್ಲದೆ, ನವೆಂಬರ್ 5 ರಂದು ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. 

ವರದಿಯಲ್ಲಿ ಐಪಿಎಸ್ ಅಧಿಕಾರಿಯೊಬ್ಬರ ಹೆಸರನ್ನು ದಾಖಲಿಸಿದ್ದ ಎಸ್ಐಟಿ ಗ್ಯಾಂಗ್'ಸ್ಟರ್'ಗೆ ನೆರವು ನೀಡಿರುವುದಾಗಿ ತಿಳಿಸಿತ್ತು. ಇದರಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರಪ್ರದೇಶ ಸರ್ಕಾರವು ಅಧಿಕಾರಿಯನ್ನು ಅಮಾನತುಗೊಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT