ನವದೆಹಲಿಯಲ್ಲಿನ ನಿರ್ಮಾಣಗೊಂಡಿರುವ ವಾತಾವರಣ 
ದೇಶ

ನಿಷೇಧದ ನಡುವಲ್ಲೂ ಪಟಾಕಿ ಹಚ್ಚಿದ ಜನತೆ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಂತ ಕಳಪೆ ಮಟ್ಟಕ್ಕಿಳಿದ ವಾಯು ಗುಣಮಟ್ಟ

ಪಟಾಕಿ ನಿಷೇಧ ಉಲ್ಲಂಘಿಸಿ ಹಲವು ಕಡೆಗಳಲ್ಲಿ ಜನರು ದೀಪಾವಳಿ ಆಚರಿಸಿದ್ದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. 

ನವದೆಹಲಿ: ಪಟಾಕಿ ನಿಷೇಧ ಉಲ್ಲಂಘಿಸಿ ಹಲವು ಕಡೆಗಳಲ್ಲಿ ಜನರು ದೀಪಾವಳಿ ಆಚರಿಸಿದ್ದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. 

ದೆಹಲಿಯಲ್ಲಿ ಶನಿವಾರ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 414 ಅಂಕ ದಾಖಲಾಗಿದೆ. ಇದಕ್ಕೆ ಶೇ.32ರಷ್ಟು ಕಾರಣ ಹೊಲ-ಗದ್ದೆಗಳಿಗೆ ರೈತರು ಬೆಂಕಿ ಹಾಕಿದ್ದು ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕಳೆದ ವರ್ಷ ದೀಪಾವಳಿಯ ವೇಳೆ ಎಕ್ಯೂಐ 368 ಅಂಕ ದಾಖಲಾಗಿತ್ತು. ಮುಂದಿನ ಎರಡು ದಿನಗಳಲ್ಲಿ ಅದು 400ಕ್ಕೆ ಏರಿಕೆಯಾಗಿತ್ತು. ಆದರೆ, ಈ ವರ್ಷ ದೀಪಾವಳಿ ಆರಂಭದಲ್ಲೇ ಎಕ್ಯೂಐ ಪ್ರಮಾಣ 400 ಅಂಕ ಗಡಿ ದಾಟಿದೆ. 

ವಾಯುಗುಣಮಟ್ಟ ಕ್ಷೀಣಿಸಿದ ಪರಿಣಾಮ, ದೆಹಲಿಯಲ್ಲಿ ದಪ್ಪ ಹೊಗೆಯ ಪದರ ಸೃಷ್ಟಿಯಾಗಿದ್ದು, ಗೋಚರತೆ ಕೂಡ ಕುಗ್ಗಿ ಹೋಗಿದೆ.

ನಾಗರಿಕರಲ್ಲಿ ಕಣ್ಣು ಉರಿ, ಗಂಟಲು ನೋವು, ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದೆ. ಹೀಗಾಗಿ, ಕೊರೊನಾ ಸೋಂಕಿನ ವ್ಯಾಪಿಸುವಿಕೆ ಅಧಿಕವಾಗುವ ಆತಂಕವೂ ಇದೀಗ ಎದುರಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT