ನಿತೀಶ್-ಮೋದಿ 
ದೇಶ

ಬಿಹಾರದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ; ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿ, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆ!

ಬಿಹಾರದಲ್ಲಿ ಸರ್ಕಾರ ರಚನೆ ಕಸರತ್ತು ಗರಿಗೆದರಿದ್ದು, ಈಗಾಗಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಪರಿಣಾಮ ಕರ್ನಾಟಕದಂತೆಯೇ ಬಿಹಾರದಲ್ಲೂ ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿಸಲಾಗಿದ್ದು, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆಸ ಎಂದು ಹೇಳಲಾಗಿದೆ.

ಪಾಟ್ನಾ: ಬಿಹಾರದಲ್ಲಿ ಸರ್ಕಾರ ರಚನೆ ಕಸರತ್ತು ಗರಿಗೆದರಿದ್ದು, ಈಗಾಗಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಪರಿಣಾಮ ಕರ್ನಾಟಕದಂತೆಯೇ ಬಿಹಾರದಲ್ಲೂ ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿಸಲಾಗಿದ್ದು, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆಸ ಎಂದು ಹೇಳಲಾಗಿದೆ.

ಆ ಬಗ್ಗೆ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದ್ದು, 'ಮುಖ್ಯಮಂತ್ರಿಯಾಗಿ ಚುನಾಯಿತರಾದ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಹೊಸ ಸಂಪುಟವು ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಹೊಂದುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಅವರ ಮಿತ್ರಪಕ್ಷ  ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ  ಕತಿಹಾರ್ ಶಾಸಕ ತಾರ್ಕಿಶೋರ್ ಪ್ರಸಾದ್ ಮತ್ತು ಬೆಟ್ಟಯ್ಯ ಶಾಸಕ ರೇಣು ದೇವಿ ಅವರ ಶಾಸಕಾಂಗ ಪಕ್ಷದ ಕ್ರಮವಾಗಿ ನಾಯಕ ಮತ್ತು ಉಪನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಹಾರದ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರು ಜುಲೈ 2017 ರಿಂದ ನಿತೀಶ್ ಕುಮಾರ್ ಸಚಿವ ಸಂಪುಟದಲ್ಲಿ ಡಿಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಈಗ ಅವರು ಕೇಂದ್ರ ಸಚಿವ ಸಂಪುಟಕ್ಕೆ ಆಯ್ಕೆಯಾಗುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಬಿಹಾರದಲ್ಲಿ ಎರಡೆರಡು ಡಿಸಿಎಂ ಹುದ್ದೆ  ಸೃಷ್ಟಿಸಲಾಗಿದೆ ಎಂದು ಹೇಳಲಾಗಿದೆ. 

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ  ಆರ್ಜೆಡಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದರೆ, ಎರಡನೇ ಸ್ಥಾನದಲ್ಲಿ ಬಿಜೆಪಿ ಹಾಗೂ ಮೂರನೇ ಸ್ಥಾನಕ್ಕೆ ಜೆಡಿಯು ತೃಪ್ತಿಪಟ್ಟುಕೊಂಡಿತ್ತು. ಒಟ್ಟಾರೆ ಎನ್ದಿಎ 125 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಗೆರೆಯನ್ನು ದಾಟಿತ್ತು. ಈಗ ನಿತೀಶ್  ಕುಮಾರ್ ಅವರು ಎನ್ದಿಎ ಶಾಸಕಾಂಗ ಪಕ್ಷದ ನಾಯಕರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT