ಪ್ರತ್ಯಕ್ಷ ದೃಶ್ಯ 
ದೇಶ

ಭೀಕರ ದೃಶ್ಯ: ನಡುರಸ್ತೆಯಲ್ಲೇ ಯುವಕನ ಕತ್ತು ಕತ್ತರಿಸಿ ಚರ್ಚ್ ಬಾಗಿಲಲ್ಲಿಟ್ಟ ದುಷ್ಕರ್ಮಿಗಳು!

ಮೂವರು ದುಷ್ಕರ್ಮಿಗಳ ತಂಡ ಹಾಡುಹಗಲೇ ಯುವಕನೋರ್ವನ ಕತ್ತು ಕಡಿದು ಚರ್ಚ್ ಬಾಗಿಲಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ಮಧುರೈ: ಮೂವರು ದುಷ್ಕರ್ಮಿಗಳ ತಂಡ ಹಾಡುಹಗಲೇ ಯುವಕನೋರ್ವನ ಕತ್ತು ಕಡಿದು ಚರ್ಚ್ ಬಾಗಿಲಲ್ಲಿ ಇಟ್ಟು ಪರಾರಿಯಾಗಿದ್ದಾರೆ. 

ಮಧುರೈನ ಸೇಂಟ್ ಮೇರೀಸ್ ಚರ್ಚ್ ಬಳಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಯುವಕನನ್ನು 22 ವರ್ಷದ ಮುರುಘನಾಥಂ ಎಂದು ಗುರುತಿಸಲಾಗಿದೆ. 

ಸ್ನೇಹಿತ ಮುನಿಸ್ವಾಮಿ ಜೊತೆ ಮುರುಘನಾಥಂ ನಡೆದುಕೊಂಡು ಬರುತ್ತಿದ್ದಾಗ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳು ಮುರುಘನಾಥಂ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಈ ವೇಳೆ ಮುನಿಸ್ವಾಮಿ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾನೆ. 

ನಂತರ ಪೊಲೀಸರಿಗೆ ಮುನಿಸ್ವಾಮಿ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಯುವಕನ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮುರುಘನಾಥಂ ಮೃತಪಟ್ಟ ನಂತರ ದುಷ್ಕರ್ಮಿಗಳು ಆತನ ತಲೆಯನ್ನು ಕಡಿದು ಹಾಕಿದ್ದಾರೆ. ಇದನ್ನು ಸ್ಥಳೀಯರೋರ್ವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT