ಸಂಗ್ರಹ ಚಿತ್ರ 
ದೇಶ

6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಹತ್ಯೆಗೈದು, ಶ್ವಾಸಕೋಶ ಕಿತ್ತೊಯ್ದ ಕಾಮುಕರು!

6 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದು ನಂತರ ಆಕೆಯ ಮೃತದೇಹದಿಂದ ಶ್ವಾಸಕೋಶವನ್ನು ಕೊಂಡೊಯ್ದಿರುವ ದೇಶವನ್ನೆ ಬೆಚ್ಚಿಬೀಳಿಸುವ ಭಯಾನಕ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ಲಖನೌ: 6 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದು ನಂತರ ಆಕೆಯ ಮೃತದೇಹದಿಂದ ಶ್ವಾಸಕೋಶವನ್ನು ಕೊಂಡೊಯ್ದಿರುವ ದೇಶವನ್ನೆ ಬೆಚ್ಚಿಬೀಳಿಸುವ ಭಯಾನಕ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

ದೀಪಾವಳಿ ಹಬ್ಬದ ದಿನದಂದು ರಾತ್ರಿ ಘಟಾಂಪುರ ಪ್ರದೇಶದಿಂದ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಅರಣ್ಯ ಪ್ರದೇಶದಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. 

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಕಾಮುಕರು ನಂತರ ಆಕೆಯ ಶ್ವಾಸಕೋಶವನ್ನು ತೆಗೆದುಕೊಂಡು ಹೋಗಿರುವುದು ಕಂಡು ಬಂದಿದೆ. ಪ್ರಕರಣ ಸಂಬಂಧ ಅಂಕುಲ್ ಕುರಿಲ್ ಮತ್ತು ಬೀರನ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಪ್ರಕರಣ ಪ್ರಮುಖ ರುವಾರಿ ಪರಶುರಾಮ್ ಎಂದು ಹೇಳಲಾಗುತ್ತಿದೆ. ಈತ 1999ರಲ್ಲಿಯೇ ವಿವಾಹವಾಗಿದ್ದರೂ ಮಕ್ಕಳಿರಲಿಲ್ಲ. ಹೀಗಾಗಿ ಮಾಟ ಮಂತ್ರ ಮಾಡುವವರ ಬಳಿ ಹೋಗಿದ್ದಾನೆ. ಈ ವೇಳೆ ಅವರು ಬಾಲಕಿಯೊಬ್ಬಳ ಶ್ವಾಸಕೋಶ ಬೇಕೆಂದು ಹೇಳಿದ್ದಾರೆ. 

ಇದನ್ನು ನಂಬಿದ ಪರಶುರಾಮ್ ತನ್ನ ಸಂಬಂಧಿಕರಾದ ಅಂಕುಲ್ ಹಾಗೂ ಬೀರನ್ ಬಳಿ ಬಾಲಕಿಯೊಬ್ಬಳ ಶ್ವಾಸಕೋಶವನ್ನು ತಂದು ಕೊಡುವಂತೆ ಹೇಳಿ ಹಣ ನೀಡುವುದಾಗಿ ತಿಳಿಸಿದ್ದಾನೆ. 

ಹೀಗಾಗಿ ಆರೋಪಿಗಳಿಬ್ಬರು ಬಾಲಕಿಯನ್ನು ಅಪಹರಣ ಮಾಡಿ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಹತ್ಯೆ ಮಾಡುವುದಕ್ಕೂ ಮುನ್ನ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಶ್ವಾಸಕೋಶವನ್ನು ತೆಗೆದಿದ್ದಾರೆ. 

ಈ ನಡುವೆ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯ ದೇಹದಲ್ಲಿ ಶ್ವಾಸಕೋಶ ನಾಪತ್ತೆಯಾಗಿರುವ ವಿಚಾರ ತಿಳಿದುಬಂದಿದೆ. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಪರಶುರಾಮ್ ಹೆಸರನ್ನು ಹೇಳಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT