ಸೋನು ಸೂದ್ 
ದೇಶ

6 ವರ್ಷದ ಬಾಲಕಿ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ನಟ ಸೋನು ಸೂದ್

ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್ ನಟ ಸೋನು ಸೂದ್ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಲೇ ಬಂದಿದ್ದಾರೆ. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ. 

ಹೈದರಾಬಾದ್: ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್ ನಟ ಸೋನು ಸೂದ್ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಲೇ ಬಂದಿದ್ದಾರೆ. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ. 

ಹೌದು, ಪಿತ್ತಜನಕಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಹೈದರಾಬಾದ್'ನ 6 ವರ್ಷದ ಹರ್ಷವರ್ಧನ್ ಎಂಬ ಬಾಲಕನೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಸೋನು ಸೂತ್ ಅವರು ಸಹಾಯ ಹಸ್ತ ಚಾಚಿದ್ದಾರೆ. 

ಕಳೆದ ಆರು ತಿಂಗಳಿಂದ ಬಾಲಕ ಪಿತ್ತಜನಕಾಂಗ ಸಮಸ್ಯೆಯಿಂದ ಬಳಲುತ್ತಿದ್ದ. ತಿಂಗಳ ಹಿಂದಷ್ಟೇ ವೈದ್ಯರ ಬಳಿ ಪರಿಶೀಲನೆ ನಡೆಸಿದಾಗ ಪಿತ್ತಜನಕಾಂಗ ಸಂಪೂರ್ಣವಾಗಿ ಹಾಳಾಗಿರುವ ವಿಚಾರ ತಿಳಿದಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದ್ದರು. ಶಸ್ತ್ರಚಿಕಿತ್ಸೆಗೆ ರೂ,20 ಲಕ್ಷ ವೆಚ್ಚವಾಗುವುದು ಎಂದು ಹೇಳಿದ್ದರು. ಶಸ್ತ್ರಚಿಕಿತ್ಸೆ ಮಾಡಿಸದೇ ಹೋದರೆ ಬಾಲಕನ ಜೀವಕ್ಕೆ ಅಪಾಯವಿದೆಎಂದಿದ್ದರು ಎಂದು ಬಾಲಕನ ತಾಯಿ ಹೇಳಿದ್ದಾರೆ. 

ಶಸ್ತ್ರಚಿಕಿತ್ಸೆ ಮಾಡಿಸಲು ನಮ್ಮ ಬಳಿ ಹಣವಿರಲಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ನಿಧಿ ಹಾಗೂ ಆರೋಗ್ಯ ಯೋಜನೆಗಳಿಂದ ಸಹಾಯ ಪಡೆಯಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದೆವು. ಆದರೆ, ಎಲ್ಲಿಯೂ ಸಹಾಯ ಸಿಗಲಿಲ್ಲ. ಚಿತ್ರೀಕರಣಗಳಲ್ಲಿ ಬಿಝಿಯಾಗಿದ್ದರೂ ಕೂಡ ವಿಚಾರ ತಿಳಿದ ಕೂಡಲೇ ಸೋನು ಸೂದ್ ಅವರು ನಮ್ಮನ್ನು ಭೇಟಿ ಮಾಡಿ, ಸಹಾಯ ಮಾಡುವುದಾಗಿ ತಿಳಿಸಿದ್ದರು. ಶಸ್ತ್ರಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಿದ್ದಾರೆ. ನಮ್ಮ ಕೊನೆ ಉಸಿರಿರುವವರೆಗೂ ಅವರ ಸಹಾಯವನ್ನು ನಾವು ಮರೆಯುವುದಿಲ್ಲ. ಭವಿಷ್ಯದಲ್ಲಿಯೂ ನಮ್ಮಂತೆಯೇ ಸಮಸ್ಯೆ ಎದುರಿಸುತ್ತಿರುವ ಸಾಕಷ್ಟು ಜನರಿಗೆ ಸಹಾಯ ಮಾಡುತ್ತಾರೆಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ. 

ಯಕೃತ್ತಿನ ಸಿರೋಸಿಸ್ ನಿಂದ ಬಾಲಕ ಬಳಲುತ್ತಿದ್ದ. ಕೂಡಲೇ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು ಎಂದು ಬಾಲಕನಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಮನೀಶ್ ವರ್ಮಾ ಅವರು ಹೇಳಿದ್ದಾರೆ. 

ಶಸ್ತ್ರಚಿಕಿತ್ಸೆ ಅತ್ಯಂತ ಗಂಭೀರವಾಗಿತ್ತು. ಚಿಕಿತ್ಸೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಹಾಗಿರಲಿಲ್ಲ. ಕೊನೆಗೂ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವೈದ್ಯರ ತಂಡ ಹಾಗೂ ಸೋನು ಸೂದ್ ಅವರ ಸಹಾಯ ಮಗುವಿಗೆ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಮಾಡಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT