ಚೀನಾದಿಂದ ಮಯನ್ಮಾರ್, ಭಾರತಕ್ಕೆ ಶಸ್ತ್ರಾಸ್ತ್ರಗಳ ಸಾಗಣೆ: ಪ್ರಾದೇಶಿಕ ಭದ್ರತೆಗೆ ಅಪಾಯ! 
ದೇಶ

ಚೀನಾದಿಂದ ಮಯನ್ಮಾರ್, ಭಾರತಕ್ಕೆ ಶಸ್ತ್ರಾಸ್ತ್ರಗಳ ಸಾಗಣೆ: ಪ್ರಾದೇಶಿಕ ಭದ್ರತೆಗೆ ಅಪಾಯ! 

ಗಲ್ವಾನ್ ಗಡಿಯಲ್ಲಿ ಗಡಿ ಕ್ಯಾತೆ ಪ್ರಾರಂಭಿಸಿದ ಚೀನಾ ಭಾರತ, ಮಯನ್ಮಾರ್ ಗಡಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಣೆ ಮಾಡುತ್ತಿದ್ದು, ಪ್ರಾದೇಶಿಕ ಭದ್ರತೆ, ಸ್ಥಿರತೆಗೆ ಅಪಾಯ ಎದುರಾಗುತ್ತಿರುವುದನ್ನು ಗುಪ್ತಚರ ಇಲಾಖೆ ಭಾರತ ಸರ್ಕಾರದ ಗಮನಕ್ಕೆ ತಂದಿದೆ. 

ನವದೆಹಲಿ: ಗಲ್ವಾನ್ ಗಡಿಯಲ್ಲಿ ಗಡಿ ಕ್ಯಾತೆ ಪ್ರಾರಂಭಿಸಿದ್ದ ಚೀನಾ, ಭಾರತ ಹಾಗೂ ಮಯನ್ಮಾರ್ ಗಡಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಣೆ ಮಾಡುತ್ತಿದ್ದು, ಪ್ರಾದೇಶಿಕ ಭದ್ರತೆ, ಸ್ಥಿರತೆಗೆ ಅಪಾಯ ಎದುರಾಗುತ್ತಿರುವುದನ್ನು ಗುಪ್ತಚರ ಇಲಾಖೆ ಭಾರತ ಸರ್ಕಾರದ ಗಮನಕ್ಕೆ ತಂದಿದೆ. 

ಭಾರತದ ಈಶಾನ್ಯ ರಾಜ್ಯಗಳ ಮೂಲಕ ಎಕೆ-47, ಎಂ-16, ಹಾಗೂ ಚೀನಾ ಪಿಸ್ತೂಲ್ ಗಳೂ ಸೇರಿ 423 ಅಕ್ರಮ ಶಸ್ತ್ರಾಸ್ತ್ರಗಳನ್ನು ಈ ವರ್ಷ ಇಲ್ಲಿಯವರೆಗೂ ವಶಕ್ಕೆ ಪಡೆಯಲಾಗಿದೆ. 

ಮಯನ್ಮಾರ್ ಗಡಿ ಪ್ರದೇಶದಲ್ಲಿರುವ ದಂಗೆಕೋರ ಗುಂಪುಗಳು ಶಸ್ತ್ರಾಸ್ತ್ರಗಳಿಗೆ ಉತ್ತಮ ಬೆಲೆ ನೀಡುತ್ತಿದ್ದು, ಚೀನಾ ಈ ಗುಂಪುಗಳಿಗೆ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಪೂರೈಕೆ ಮಾಡುತ್ತಿರುವುದನ್ನು ಗುಪ್ತಚರ ಇಲಾಖೆ ಸರ್ಕಾರದ ಗಮನಕ್ಕೆ ತಂದಿದೆ. 

ಭಾರತದ ಗುಪ್ತಚರ ಇಲಾಖೆಗಳ ಪ್ರಕಾರ ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಮ್ ಗಳಲ್ಲಿನ ದಂಗೆಕೋರ ಗುಂಪುಗಳು ಚೀನಾದ ಗುಪ್ತಚರ ಏಜೆನ್ಸಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹಲವಾರು ಪ್ರಯೋಜನಗಳನ್ನು ಪಡೆದುಕೊಂಡಿವೆ.

ಚೀನಾ ಶಸ್ತ್ರಾಸ್ತ್ರಗಳನ್ನು ಮಾತ್ರ ಪೂರೈಕೆ ಮಾಡುವುದಲ್ಲದೇ, ಈಶಾನ್ಯ ಗಡಿ ಪ್ರದೇಶದಲ್ಲಿ ದಂಗೆಕೋರ ಗುಂಪುಗಳಿಗೆ ತರಬೇತಿ ನೀಡುವುದು ಹಾಗೂ ಗಡಿಪಾರಾದ ಭಯೋತ್ಪಾದರಿಗೆ ಆಶ್ರಯ ನೀಡುವುದನ್ನು ಭಾರತದ ವಿರುದ್ಧದ ಡಿಪ್ಲೊ-ಭಯೋತ್ಪಾದನೆ ಭಾಗವಾಗಿ ನಡೆಸುತ್ತಿರುವುದನ್ನು ಗುಪ್ತಚರ ಸಂಸ್ಥೆಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT