ಬಬುಲ್ ಸುಪ್ರಿಯೋ ಮತ್ತು ಮಮತಾ ಬ್ಯಾನರ್ಜಿ 
ದೇಶ

ಬಂಗಾಳದಲ್ಲಿ 130 ಬಿಜೆಪಿ ಕಾರ್ಯಕರ್ತರ ಹತ್ಯೆ: ಮಮತಾ ಬ್ಯಾನರ್ಜಿ ವಿರುದ್ಧ ಬಬುಲ್ ಸುಪ್ರಿಯೋ ತಿರುಗೇಟು

2021 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.

ನವದೆಹಲಿ: 2021 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 200 ಸೀಟುಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.

ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಮತಾ ದೀದಿ ಅಧಿಕಾರದಲ್ಲಿದ್ದು, ಆಡಳಿತಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಬಂಗಾಳದ ಜನ ನಮ್ಮೊಂದಿಗಿದ್ದಾರೆ, ಹೀಗಾಗಿ ಮುಂದಿನ ಚುನಾವಣೆಯಲ್ಲಿ 200 ಸೀಟುಗಳನ್ನು ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ, ರಾಜ್ಯದಲ್ಲಿ ಹಿಂಸಾಚಾರ ಅಧಿಕವಾಗಿದ್ದು,  130 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಾದ ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವೆಂದು ನಿರ್ಧರಿಸಿ, ರಾಷ್ಟ್ರೀಯ ರಜಾದಿನಗಳಂತೆ ಘೋಷಿಸಲಾಗುವುದು ಎಂದು ಸುಪ್ರಿಯೋ ಹೇಳಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಯುಷ್ಮಾನ್ ಭಾರತ್, ಪಿಎಂ-ಕಿಸಾನ್ ಸೇರಿದಂತೆ ಕೇಂದ್ರ ಯೋಜನೆಗಳನ್ನು ರಾಜ್ಯದಲ್ಲಿ ನಿರ್ಬಂಧಿಸಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದು, ಪಶ್ಚಿಮ ಬಂಗಾಳದಲ್ಲೂ ಇದೇ ರೀತಿಯ ಅಭಿವೃದ್ಧಿಯನ್ನು ಬಿಜೆಪಿ ಬಯಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT