ವಿಮಾನ ನಿಲ್ದಾಣ ಚಿತ್ರ 
ದೇಶ

ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣಗಳು ಸಜ್ಜು!

ಜಗತ್ತಿನಾದ್ಯಂತ ಕೆಲ ಕೊರೋನಾವೈರಸ್ ಲಸಿಕೆಗಳ ಪ್ರಯೋಗ ಅಂತಿಮ ಹಂತದಲ್ಲಿರುವಂತೆಯೇ, ದೇಶದಲ್ಲಿ ತಾಪಮಾನ ಸೂಕ್ಷ್ಮ ಲಸಿಕೆಗಳ ವಿತರಣೆ ಕಾರ್ಯಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳು ಹಾಗೂ ಭಾರತೀಯ ವಿಮಾನಯಾನ ಸಂಸ್ಥೆಗಳು ಸಜ್ಜುಗೊಂಡಿವೆ.

ನವದೆಹಲಿ: ಜಗತ್ತಿನಾದ್ಯಂತ ಕೆಲ ಕೊರೋನಾವೈರಸ್ ಲಸಿಕೆಗಳ ಪ್ರಯೋಗ ಅಂತಿಮ ಹಂತದಲ್ಲಿರುವಂತೆಯೇ, ದೇಶದಲ್ಲಿ ತಾಪಮಾನ ಸೂಕ್ಷ್ಮ ಲಸಿಕೆಗಳ ವಿತರಣೆ ಕಾರ್ಯಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳು ಹಾಗೂ ಭಾರತೀಯ ವಿಮಾನಯಾನ ಸಂಸ್ಥೆಗಳು ಸಜ್ಜುಗೊಂಡಿವೆ.

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಜಿಎಂಆರ್ ಹೈದ್ರಾಬಾದ್ ವಿಮಾನ ನಿಲ್ದಾಣಗಳು ತಾಪಮಾನ ಸೂಕ್ಷ್ಮ ವಿತರಣೆ ವ್ಯವಸ್ಥೆ ಹಾಗೂ ಹೊಸತನದೊಂದಿಗೆ ಕೋವಿಡ್-19 ಲಸಿಕೆ ವಿತರಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ಸಿದ್ದಗೊಂಡಿವೆ.

ದೆಹಲಿ ವಿಮಾನ ನಿಲ್ದಾಣ ವಿಶ್ವ ಗುಣಮಟ್ಟದ ಮೂಲಸೌಕರ್ಯದೊಂದಿಗೆ ಎರಡು ಸರಕು ಟರ್ಮಿನಲ್ ಹೊಂದಿದ್ದು, ತಾಪಮಾನ ಸೂಕ್ಷ್ಮ ಸರಕು ನಿರ್ವಹಣೆಗಾಗಿ ಪ್ರಮಾಣೀಕೃತ ತಾಪಮಾನ-ನಿಯಂತ್ರಿತ ಸೌಲಭ್ಯವನ್ನು ಹೊಂದಿದೆ.ವಾರ್ಷಿಕವಾಗಿ 1.5 ಲಕ್ಷ ಮೆಟ್ರಿಕ್ ಟನ್ ನಿರ್ವಹಿಸುವ ಸಾಮರ್ಥ್ಯದೊಂದಿಗೆ  ಅತ್ಯಾಧುನಿಕ ತಾಪಮಾನ-ನಿಯಂತ್ರಿತ ವಲಯಗಳನ್ನು ಹೊಂದಿದ್ದು, +25 ರಿಂದ -20 ಡಿಗ್ರಿ ಸೆಲ್ಸಿಯಸ್ ವರೆಗಿನ ಪ್ರತ್ಯೇಕ ತಂಪಾದ ಕೊಠಡಿಗಳೊಂದಿಗೆ  ಕೋವಿಡ್ ಲಸಿಕೆ ವಿತರಣೆಗೆ ಅತ್ಯಂತ ಅನುಕೂಲಕರವಾಗಿದೆ ಎಂದು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಕ್ತಾರರು ತಿಳಿಸಿದ್ದಾರೆ.

ಜಿಎಂಆರ್ ಹೈದರಾಬಾದ್ ವಿಮಾನ ನಿಲ್ದಾಣದ ಟರ್ಮಿನಲ್ -20 ರಿಂದ +25 ಡಿಗ್ರಿ ಸೆಲ್ಸಿಯಸ್ ವರೆಗಿನ ಅತ್ಯಾಧುನಿಕ ಉಪಕರಣಗಳು ಮತ್ತು ಉತ್ಪನ್ನ-ನಿರ್ದಿಷ್ಟ ಅವಶ್ಯಕತೆಗಳನ್ನು ಪೂರೈಸಲು ತಂಪಾದ  ಕಂಟೈನರ್ ಗಳನ್ನು ಹೊಂದಿರುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್- 19 ಲಸಿಕೆ ವಿತರಣೆ ಕಾರ್ಯಕ್ಕಾಗಿ ಸಂಪೂರ್ಣವಾಗಿ ಸಿದ್ಧಗೊಂಡಿರುವುದಾಗಿ ಸ್ಪೈಸ್ ಜೆಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗಾಗಲೇ ರಕ್ತದ ಮಾದರಿಗಳನ್ನು ಸಾಗಿಸಿದ ಅನುಭವ ವಿರುವುದಾಗಿ ಸ್ಟೈಸ್ ಜೆಟ್ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT