ಶಾರ್ಜಿಲ್ ಇಮಾಮ್ - ಉಮರ್ ಖಾಲಿದ್ 
ದೇಶ

ಶಾರ್ಜಿಲ್‌ ಇಮಾಮ್, ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ನ.23ರ ವರೆಗೆ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್‌ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ. ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್‌ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ.

ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಸೋಮವಾರದ ವರೆಗೆ ವಿಸ್ತರಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಅವರನ್ನು ಬಂಧಿಸಲಾಗಿದೆ.

ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹಾಗೂ ದೇಶದ್ರೋಹದ ಹೇಳಿಕೆ ನೀಡಿದ ಆರೋಪದ ಮೇಲೆ ಆಗಸ್ಟ್ 25 ರಂದು ಬಿಹಾರದ ಜಿಹಾನಬಾದ್ ಜಿಲ್ಲೆಯ ಕಾಕೊ ಬಳಿ ಶಾರ್ಜಿಲ್ ಇಮಾಮ್ ಅವರನ್ನು ಬಂಧಿಸಲಾಗಿತ್ತು. ನಂತರ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT