ನಾಲ್ಕು ಉಗ್ರರ ಹತ್ಯೆ 
ದೇಶ

ನಾಲ್ವರು ಜೈಶ್ ಉಗ್ರರ ಹತ್ಯೆಯಿಂದ 'ದೊಡ್ಡ ದಾಳಿ'ಯ ಯತ್ನ ವಿಫಲಗೊಂಡಿದೆ: ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸಂಘಟನೆಯ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸಂಘಟನೆಯ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದು, ಭದ್ರತಾ ಪಡೆಗಳು "ದೊಡ್ಡ ದಾಳಿ ಮತ್ತು ವಿನಾಶ" ಮಾಡುವ ಉಗ್ರರ ಯತ್ನವನ್ನು ವಿಫಲಗೊಳಿಸಿವೆ ಎಂದು ಹೇಳಿದ್ದಾರೆ.

ನವೆಂಬರ್ 26ಕ್ಕೆ ಮುಂಬೈ ದಾಳಿಗೆ 12 ವರ್ಷವಾಗಲಿದ್ದು, ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದು ಜೈಶ್ ಉಗ್ರರು ಮತ್ತೊಂದು ದೊಡ್ಡ ದಾಳಿಗೆ ಸಂಚು ರೂಪಿಸಿದ್ದರು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. 

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೆಇಎಂಗೆ ಸೇರಿದ 4 ಉಗ್ರರನ್ನು ಹೊಡೆದುರಿಳಿಸಿರುವುದು ಮತ್ತು ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದನ್ನು ಗಮನಿಸಿದರೆ ಒಂದು ದೊಡ್ಡ ಹಾನಿ ಮತ್ತು ವಿನಾಶವನ್ನು ತಪ್ಪಿಸಿದಂತಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಅವರು ಮತ್ತೊಮ್ಮೆ ಅತ್ಯಂತ ಧೈರ್ಯ ಮತ್ತು ವೃತ್ತಿಪರತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.

"ಭದ್ರತಾ ಪಡೆಗಳ ಜಾಗರೂಕತೆಗೆ ಧನ್ಯವಾದಗಳು, ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗುರಿಯಾಗಿಸುವ ಕೆಟ್ಟ ಉದ್ದೇಶವನ್ನು ಸೋಲಿಸಿದ್ದಾರೆ" ಎಂದು ಪ್ರಧಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT