ಸೋನಿಯಾ, ರಾಹುಲ್ ಗಾಂಧಿ 
ದೇಶ

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

ಪಣಜಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

ವಾಯು ಮಾಲಿನ್ಯ ಕಡಿಮೆ ಇರುವ ಪ್ರದೇಶದಲ್ಲಿ ಸಮಯ ಕಳೆಯುವಂತೆ ಈ ಹಿಂದೆ ವೈದ್ಯರು ನೀಡಿದ್ದ ಸಲಹೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಪಣಜಿಗೆ ಆಗಮಿಸಿದ್ದಾರೆ.

ಆಗಸ್ಟ್ ತಿಂಗಳಿನಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಹೆಚ್ಚಿನ ರೀತಿಯ ವೈದ್ಯಕೀಯ ನಿಗಾವಣೆಯಲ್ಲಿದ್ದು, ಅವರ ನಿರಂತರ ಎದೆ ಸೋಂಕಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಗೋವಾಕ್ಕೆ ಬಂದಿದ್ದಾರೆ, ದೆಹಲಿಯಲ್ಲಿನ ಮಾಲಿನ್ಯದ ಕಾರಣ ಅಲ್ಲ ಎಂದು ಮೂಲಗಳು ತಿಳಿಸಿವೆ.

ದೆಹಲಿಯ ವಾಯುಮಾಲಿನ್ಯವು ಸೋನಿಯಾ ಗಾಂಧಿಗೆ  ಆಸ್ತಮಾ ಮತ್ತು ಎದೆ ಸಮಸ್ಯೆಗೆ ಕಾರಣವಾಗಿದ್ದು, ಅಲ್ಲಿಂದ ಕೆಲಕಾಲ ಬೇರೆಡೆಗೆ ತೆರಳುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಕಂಗೆಟ್ಟಿದ ಕೆಲ ನಾಯಕರು, ಪಕ್ಷದ ಕಳಪೆ ಸಾಧನೆ ಬಗ್ಗೆ ಸಮಗ್ರ ಪರಾಮರ್ಶೆ ನಡೆಸುವಂತೆ ಒತ್ತಾಯ ಹೇರಿದ್ದರು. ಈ ನಡುವೆಯೇ ಸೋನಿಯಾ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT