ದೇವೇಂದ್ರ ಫಡ್ನವಿಸ್ 
ದೇಶ

'ಅಖಂಡ ಭಾರತ'ದಲ್ಲಿ ನಮಗೆ ನಂಬಿಕೆ ಇದೆ, ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ: ದೇವೇಂದ್ರ ಫಡ್ನವಿಸ್

‘ಅಖಂಡ ಭಾರತ’ದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ, ಮುಂದೆ ಒಂದಲ್ಲ ಒಂದು ದಿನ ನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.

ಮುಂಬೈ:  ‘ಅಖಂಡ ಭಾರತ’ದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ, ಮುಂದೆ ಒಂದಲ್ಲ ಒಂದು ದಿನ ನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.

ಮುಂಬೈನಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡುತ್ತಾ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ.

ಆಡಳಿತಾರೂಢ ಶಿವಸೇನಾ ಕಾರ್ಯಕರ್ತರೊಬ್ಬರು ಸಿಹಿ ತಿನಿಸಿನ ಅಂಗಡಿಯೊಂದರ ಮಾಲೀಕರಿಗೆ ‘ಕರಾಚಿ’ ಎಂಬ ಪದವನ್ನು ಅಂಗಡಿಯ ಹೆಸರಿನಿಂದ ಕೈಬಿಡುವಂತೆ ಕೋರಿದ್ದರು, ಕಾರಣ ಕರಾಚಿ ಪಾಕಿಸ್ತಾನದ ನಗರಒಂದರ ಹೆಸರಾಗಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ಮಹಾ ಮಾಜಿ ಸಿಎಂ"ನಾವು" ಅಖಂಡ ಭಾರತ"(ಅವಿಭಜಿತ ಭಾರತ) ದಲ್ಲಿ ನಂಬಿಕೆ ಇಟ್ಟಿದ್ದೇವೆ ಮತ್ತು ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ ಎಂದು ನಾವು ನಂಬುತ್ತೇವೆ" ಎಂದಿದ್ದಾರೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಲವ್ ಜಿಹಾದ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು . ಲವ್ ಜಿಹಾದ್ ಎಂಬ ಪದವನ್ನು ಬಿಜೆಪಿ ಸೃಷ್ಟಿ ಮಾಡಿದೆ ಮತ್ತು ಕೋಮು ಸೌಹಾರ್ದತೆಗೆ ಭಂಗ ತರುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆ ಕುರಿತು ಮಾತನಾಡಿ "ಇವರೆಲ್ಲರೂ ಹುಸಿ ಜಾತ್ಯತೀತವಾದಿಗಳು, ಹಿಂದೂಗಳ ಮೇಲೆ ಹಲ್ಲೆ ಮತ್ತು ನಿಂದನೆಯನ್ನು ಅವರು ಜಾತ್ಯಾತೀತತೆ ಎಂದು ಭಾವಿಸಿದ್ದಾರೆ. " ಎಂದರು

ದೇಶದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಮತ್ತು ಬಿಜೆಪಿ ಅಧಿಕಾರದಲ್ಲಿರದ ಕೇರಳದಲ್ಲೂ ಇದನ್ನುಒಪ್ಪಿಕೊಳ್ಳಲಾಗಿದೆಎಂದು ಅವರು ಹೇಳಿದರು. "ಇಂತಹ ವಿಷಯಗಳು ಬೆಳಕಿಗೆ ಬಂದಾಗ ಕಾನೂನು ರೂಪಿಸುವುದುಸರ್ಕಾರದ ಕೆಲಸ" ಎಂದು ಫಡ್ನವೀಸ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT