ಎಂಜೆ ಅಕ್ಬರ್, ಪ್ರಿಯಾ ರಮಣಿ 
ದೇಶ

ಮೀಟೂ: ಮಾನಹಾನಿ ಪ್ರಕರಣದಲ್ಲಿ ಅಕ್ಬರ್, ಪ್ರಿಯಾ ರಮಣಿ ನಡುವೆ ರಾಜಿಗೆ ಅವಕಾಶ ಇದೆಯೇ?- ನ್ಯಾಯಾಲಯ

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂಜೆ ಅಕ್ಬರ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅವರಿಬ್ಬರ ನಡುವೆ ರಾಜಿಗೆ ಅವಕಾಶ ಇದೆಯಾ  ಎಂದು ದೆಹಲಿಯ ನ್ಯಾಯಾಲಯವೊಂದು ಶನಿವಾರ ಕೇಳಿದೆ.

ನವದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂಜೆ ಅಕ್ಬರ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅವರಿಬ್ಬರ ನಡುವೆ ರಾಜಿಗೆ ಅವಕಾಶ ಇದೆಯೇ ಎಂದು ದೆಹಲಿಯ ನ್ಯಾಯಾಲಯವೊಂದು ಶನಿವಾರ ಕೇಳಿದೆ.

20 ವರ್ಷಗಳ ಹಿಂದೆ ಪತ್ರಕರ್ತೆಯಾಗಿದ್ದ ಸಮಯದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದ ಪ್ರಿಯಾ ರಮಣಿ ವಿರುದ್ಧ ಎಂ. ಜೆ. ಅಕ್ಬರ್ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

2018ರಲ್ಲಿ ಮೀಟೂ ಅಭಿಯಾನದಲ್ಲಿ ಎಂಜೆ ಅಕ್ಬರ್ ವಿರುದ್ಧ ರಮಣಿ ಆರೋಪ ಮಾಡಿದ್ದರು. ಸಾರ್ವಜನಿಕ ಒಳಿತಿಗಾಗಿ ಸತ್ಯವನ್ನು ಬಹಿರಂಗಪಡಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದರು.

ಈ ಪ್ರಕರಣದ ಬಗ್ಗೆ ಅಂತಿಮ ವಾದವನ್ನು ಇಂದು ಆರಂಭಿಸಿದ  ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ರವೀಂದ್ರ ಕುಮಾರ್ ಪಾಂಡೆ ಈ ಪ್ರಶ್ನೆಯನ್ನು ಮುಂದಿಟ್ಟರು. ಅಕ್ಬರ್ ಪರ ವಾದ ಮಂಡಿಸಿದ ಹಿರಿಯ ವಕೀಲೆ ಗೀತಾ ಲೂರ್ಥಾ, ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಮುನ್ನ ತನ್ನ ಕಕ್ಷಿದಾರರ ಮಾತನಾಡಬೇಕಿದ್ದು, ಸಮಯದ ಅಗತ್ಯವಿದೆ ಎಂದರು.

ಈ ಪ್ರಕರಣದ ಸಂಗತಿಗಳು ವಿಚಿತ್ರವಾದ ಕಾರಣ ರಾಜಿಗೆ ಕಡಿಮೆ ಅವಕಾಶವಿದೆ ಎಂದು ರಮಣಿಯ ಪರ ವಕೀಲ ಭಾವೂಕ್ ಚೌಹಾನ್ ಹೇಳಿದ್ದಾರೆ. ಒಪ್ಪಂದದ ಬಗ್ಗೆ ಇಬ್ಬರು ಪ್ರತಿಕ್ರಿಯಿಸುವಂತೆ ತಿಳಿಸಿದ ನ್ಯಾಯಾಲಯ, ನವೆಂಬರ್ 24ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT