ಸಂಗ್ರಹ ಚಿತ್ರ 
ದೇಶ

ನಗ್ರೋಟಾ ಎನ್ಕೌಂಟರ್: ಪಾಕಿಸ್ತಾನ ರಾಯಭಾರಿಗೆ ಬುಲಾವ್, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ

ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ. 

ನವದೆಹಲಿ: ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಶನಿವಾರ ತಿಳಿದುಬಂದಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಯೋಜಿಸಿರುವ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನ ಕೂಡಲೇ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರರಿಗೆ ಬೆಂಬಲನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದೆ. 

ಭಾರತ ಸರ್ಕಾರ ದೇಶದ ಭದ್ರತೆಯನ್ನು ಕಾಪಾಡಲು ಎಲ್ಲಾ ರೀತಿಯ ಅಗತ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದೆ. 

ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್'ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು. 

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಗುರುವಾರ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT