ಖಾಸಗಿ ಆಸ್ಪತ್ರೆಗಳಿಂದ ಅತಿಯಾದ ಶುಲ್ಕ; ಆರೋಗ್ಯದ ಮೇಲಿನ ಖರ್ಚು ಕಳಪೆ: ಕೋವಿಡ್-19 ಕುರಿತು ಸಂಸತ್ ಸಮಿತಿ 
ದೇಶ

ಖಾಸಗಿ ಆಸ್ಪತ್ರೆಗಳಿಂದ ಅತಿಯಾದ ಶುಲ್ಕ; ಆರೋಗ್ಯದ ಮೇಲಿನ ಖರ್ಚು ಕಳಪೆ: ಕೋವಿಡ್-19 ಕುರಿತು ಸಂಸತ್ ಸಮಿತಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಅಸಮರ್ಪಕ ಹಾಸಿಗೆಗಳು, ಕೋವಿಡ್-19 ಚಿಕಿತ್ಸೆಯ ನಿರ್ದಿಷ್ಟ ಮಾರ್ಗಸೂಚಿಗಳ ಅನುಪಸ್ಥಿತಿ ಖಾಸಗಿ ಆಸ್ಪತ್ರೆಗಳು ಅತಿ ಹೆಚ್ಚಿನ ಶುಲ್ಕ ವಿಧಿಸುವುದಕ್ಕೆ ಕಾರಣವಾಗಿದ್ದು, ಸುಸ್ಥಿರ ಬೆಲೆ ಮಾದರಿಳಿಂದ ಕೋವಿಡ್-19 ನಿಂದ ಉಂಟಾಗುತ್ತಿರುವ ಅನೇಕ ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಸಂಸತ್ ಸಮಿತಿ ವರದಿ ನೀಡಿದೆ. 

ನವದೆಹಲಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಅಸಮರ್ಪಕ ಹಾಸಿಗೆಗಳು, ಕೋವಿಡ್-19 ಚಿಕಿತ್ಸೆಯ ನಿರ್ದಿಷ್ಟ ಮಾರ್ಗಸೂಚಿಗಳ ಅನುಪಸ್ಥಿತಿ ಖಾಸಗಿ ಆಸ್ಪತ್ರೆಗಳು ಅತಿ ಹೆಚ್ಚಿನ ಶುಲ್ಕ ವಿಧಿಸುವುದಕ್ಕೆ ಕಾರಣವಾಗಿದ್ದು, ಸುಸ್ಥಿರ ಬೆಲೆ ಮಾದರಿಳಿಂದ ಕೋವಿಡ್-19ನಿಂದ ಉಂಟಾಗುತ್ತಿರುವ ಅನೇಕ ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಸಂಸತ್ ಸಮಿತಿ ವರದಿ ನೀಡಿದೆ. 

ಇದೇ ಮೊದಲ ಬಾರಿಗೆ ಸರ್ಕಾರ ಆರೋಗ್ಯದ ಮೇಲೆ ಖರ್ಚು ಮಾಡುತ್ತಿರುವುದರ ಬಗ್ಗೆ ಹಾಗೂ ಕೋವಿಡ್-19 ನಿರ್ವಹಣೆಯ ಬಗ್ಗೆ ಸಂಸತ್ ಸಮಿತಿಯೊಂದು ವರದಿ ನೀಡಿದೆ. 

ಆರೋಗ್ಯದ ಮೇಲಿನ ಸಂಸತ್ ಸ್ಥಾಯಿ ಸಮಿತಿಯ ಅಧ್ಯಕ್ಷ ರಾಮ್ ಗೋಪಾಲ್ ಯಾದವ್, 1.3 ಬಿಲಿಯನ್ ಜನಸಂಖ್ಯೆ ಇರುವ ದೇಶದಲ್ಲಿ ಆರೋಗ್ಯಕ್ಕಾಗಿ ಮಾಡುತ್ತಿರುವ ಖರ್ಚು ಅತ್ಯಂತ ಕಡಿಮೆ, ಭಾರತೀಯ ಆರೋಗ್ಯ ವ್ಯವಸ್ಥೆ ಕೋವಿಡ್-19 ನಿರ್ವಹಣೆಯಲ್ಲಿ ಪರಿಣಾಮಕಾರಿ ಪ್ರತಿಕ್ರಿಯೆ ತೋರಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಲ್ಲಿ ಹೇಳಿದ್ದು, ಕೋವಿಡ್-19 ಸಾಂಕ್ರಾಮಿಕ ಸ್ಫೋಟ ಹಾಗೂ ಅದರ ನಿರ್ವಹಣೆ ಎಂಬ ವರದಿಯನ್ನು ರಾಜ್ಯಸಭಾಧ್ಯಕ್ಷ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಕೆ ಮಾಡಲಾಗಿದೆ.

"ಸರ್ಕಾರ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ಹೂಡಿಕೆಯನ್ನು ಹೆಚ್ಚಿಸಬೇಕು, ಎರಡು ವರ್ಷಗಳಲ್ಲಿ ಜಿಡಿಪಿ ಶೇ.2.4 ರಷ್ಟು ಖರ್ಚು ಮಾಡುವುದು ಇನ್ನೂ ದೂರದ ಮಾತಾಗಿದೆ, ಅಲ್ಲಿಯವರೆಗೂ ಸಾರ್ವಜನಿಕ ಆರೋಗ್ಯ ಅಪಾಯಕ್ಕೆ ಸಿಲುಕಲಿದೆ, ಆದ್ದರಿಂದ ಸರ್ಕಾರ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ಹೂಡಿಕೆಯನ್ನು ಹೆಚ್ಚಿಸಬೇಕು ಎಂದು" ಸಮಿತಿ ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

T20 ವಿಶ್ವಕಪ್ 2026: 4 ಓವರ್ ನಲ್ಲಿ 53 ರನ್.. ಸೈಲೆಂಟ್ ಮಾಡಲು ಬಂದು ತಮ್ಮ ತಂಡವೇ ಸೈಲೆಂಟ್ ಆಗುವಂತೆ ಮಾಡಿದ Sam Curran

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

SCROLL FOR NEXT