ರೈತರ ಚಿತ್ರ 
ದೇಶ

ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ: ಪ್ರಯಾಣಿಕರ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲು ಪಂಜಾಬ್ ರೈತರ ಒಪ್ಪಿಗೆ 

 ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ರೈತ ಸಂಘಟನೆಗಳು ಸೋಮವಾರದಿಂದ ರೈಲು ಸಂಚಾರ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಶನಿವಾರ ಪ್ರಕಟಿಸಿವೆ.

ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ರೈತ ಸಂಘಟನೆಗಳು ಸೋಮವಾರದಿಂದ ರೈಲು ಸಂಚಾರ ನಿರ್ಬಂಧವನ್ನು ತೆರವುಗೊಳಿಸುವುದಾಗಿ ಶನಿವಾರ ಪ್ರಕಟಿಸಿವೆ.

ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗೆ ವಿವಿಧ ರೈತ ಮುಖಂಡರು ಸಭೆ ನಡೆಸಿದ ಬಳಿಕ ರಾಜ್ಯದಲ್ಲಿ ಪ್ರಯಾಣಿಕ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. 

ಸೋಮವಾರದಿಂದ ರೈಲು ದಿಗ್ಬಂದನವನ್ನು ಸಂಪೂರ್ಣ ತೆಗೆದುಹಾಕುವ ಮೂಲಕ ಸರಕು ಮತ್ತು ಪ್ರಯಾಣಿಕರ ರೈಲುಗಳಿಗೆ ಅವಕಾಶ ಕಲ್ಪಿಸಲು ಪಂಜಾಬ್ ರೈತರು ಮುಖ್ಯಮಂತ್ರಿ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 24 ರಿಂದ ರೈಲು ರೊಕೊ ಪ್ರತಿಭಟನೆ ನಡೆಸುತ್ತಿದ್ದ ರೈತ ಸಂಘಟನೆಗಳು, ರೈಲು ಹಳಿ ತೆರವಿನ ಜೊತೆಗೆ ಸರಕು ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಈಗಾಗಲೇ ಒಪ್ಪಿಕೊಂಡಿದ್ದವು. 

ಆದರೆ, ರೈಲುಗಳನ್ನು ಪುನರ್ ಆರಂಭಿಸುವುದರ ಬಗ್ಗೆ ಪ್ರತಿಭಟನಾ ನಿರತ ರೈತರು ಮತ್ತು ರೈಲ್ವೆ ನಡುವೆ ಗೊಂದಲವು ಮುಂದುವರೆದಿತ್ತು. ಸರಕು ರೈಲುಗಳ ಪುನರ್ ಆರಂಭಕ್ಕೆ ರೈಲ್ವೆ ನಿರಾಕರಿಸಿತ್ತು. ರಾಜ್ಯ ಸರ್ಕಾರದಿಂದ ಸಂಪೂರ್ಣ ಭರವಸೆ ಸಿಗುವವರೆಗೂ ಸರಕು ಮತ್ತು ಪ್ರಯಾಣಿಕರ ರೈಲುಗಳನ್ನು ಓಡಿಸುವುದಿಲ್ಲ ಎಂದು ರೈಲ್ವೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT