ಸಿಎಂ ಪಳನಿಸ್ವಾಮಿ 
ದೇಶ

ತಮಿಳುನಾಡು: ವೈದ್ಯಕೀಯ ಪ್ರವೇಶ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಖಾಸಗಿ ವೈದ್ಯಕೀಯ ಕಾಲೇಜ್ ಗಳಲ್ಲಿ ಶೇ. 7.5 ಮೀಸಲಾತಿ ಅಡಿಯಲ್ಲಿ ವೈದ್ಯಕೀಯ ಪ್ರವೇಶ ಪಡೆದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಶುಲ್ಕ, ಇತ್ಯಾದಿಗಳನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಘೋಷಿಸಿದ್ದಾರೆ.

ಚೆನ್ನೈ: ಖಾಸಗಿ ವೈದ್ಯಕೀಯ ಕಾಲೇಜ್ ಗಳಲ್ಲಿ ಶೇ. 7.5 ಮೀಸಲಾತಿ ಅಡಿಯಲ್ಲಿ ವೈದ್ಯಕೀಯ ಪ್ರವೇಶ ಪಡೆದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಶುಲ್ಕ, ಇತ್ಯಾದಿಗಳನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಘೋಷಿಸಿದ್ದಾರೆ.

ಇನ್ನು ಮುಂದೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಾವತಿಗಾಗಿ ಕಾಯಬೇಕಿಲ್ಲ. ಸರ್ಕಾರ ಎಲ್ಲಾ ಶೈಕ್ಷಣಿಕ ವೆಚ್ಚವನ್ನು ಭರಿಸಲಿದೆ. ತಮಿಳುನಾಡು ವೈದ್ಯಕೀಯ ಸೇವೆಗಳ ನಿಗಮ ಲಿಮಿಟೆಡ್‌ನೊಂದಿಗೆ ಆವರ್ತಕ ಸಾಲನಿಧಿ ಫಂಡ್ ರಚಿಸುವ ಮೂಲಕ ಶುಲ್ಕವನ್ನು ಪಾವತಿಸಲಾಗುವುದು ಎಂದು ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸುವಾಗ ಎದುರಿಸುವ ಕಷ್ಟಗಳನ್ನು ತಪ್ಪಿಸುವ ಉದ್ದೇಶದಿಂದ ನಾನು ಮೇಲಿನ ಘೋಷಣೆ ಮಾಡಿದ್ದೇನೆ. ಈ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ನೆರವು ಸಿಗುತ್ತದೆ. ಆದರೆ ಶೈಕ್ಷಣಿಕ ವೆಚ್ಚವನ್ನು ಭರಿಸುವುದಾಗಿ ಡಿಎಂಕೆ ಹೇಳಿರುವುದು ಕೇವಲ ನಾಟಕ. ಜನರಿಗೆ ಇದು ಚೆನ್ನಾಗಿ ತಿಳಿದಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಇದಕ್ಕು ಮುನ್ನ, ಶೇ. 7.5 ಮೀಸಲಾತಿ ಅಡಿಯಲ್ಲಿ ಈ ವರ್ಷ ನೀಟ್ ಪಾಸ್ ಮಾಡಿ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ನಮ್ಮ ಪಕ್ಷವೇ ಭರಿಸಲಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT