ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿರುವುದು 
ದೇಶ

ಸ್ವಚ್ಛ ಮನಸ್ಸು, ನಿಷ್ಕಳಂಕ ವ್ಯಕ್ತಿತ್ವ, ಸ್ಪಷ್ಟ ಗುರಿಯೊಂದಿಗೆ ಯುವಜನತೆ ಮುನ್ನಡೆಯಬೇಕು: ಪ್ರಧಾನಿ ಮೋದಿ ಕಿವಿಮಾತು

ಕೋವಿಡ್ ಸಾಂಕ್ರಾಮಿಕದ ನಡುವೆ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಡುವೆ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಇಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದೇಶದ ಗುರಿಯಿದ್ದು ಅದರೆಡೆಗೆ ಹೆಜ್ಜೆಹಾಕಿ ಇಂಗಾಲದ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದರು. 

21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ಕಿವಿಮಾತು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

Mysuru: ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತಿದ್ದ ಚಿರತೆ, ವೃದ್ಧ ತಾಯಿಯ ಹೊರಗೆಳೆದ ಮಗಳು, ಕಾರ್ಯಾಚರಣೆಯೇ ರೋಚಕ!

IPL 2026: KKR ವಿರುದ್ಧ GT ಗೆ 5 ವಿಕೆಟ್ ಜಯ, ಗಿಲ್ ಭರ್ಜರಿ ಬ್ಯಾಟಿಂಗ್

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

SCROLL FOR NEXT