ಶ್ರೀಪಾದ್ ನಾಯ್ಕ್ 
ದೇಶ

ಕೋವಿಡ್-19 ನಂತರದ ಸಮಸ್ಯೆಗಳಿಗೆ ಯೋಗ, ಆಯುರ್ವೇದ ಹೆಚ್ಚು ಸಹಕಾರಿ- ಶ್ರೀಪಾದ್ ನಾಯ್ಕ್ 

ಕೋವಿಡ್-19 ನಂತರದ ತೊಂದರೆಗಳನ್ನು ಎದುರಿಸಲು ಆಯುರ್ವೇದ, ಯೋಗ ಮತ್ತು ಇತರ ವಿಧಾನಗಳು ಇಡೀ ಜಗತ್ತಿಗೆ ತುಂಬಾ ಸಹಕಾರಿಯಾಗಲಿವೆ ಎಂದು ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ (ಸ್ವತಂತ್ರ) ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ.

 ಪಣಜಿ: ಕೋವಿಡ್-19 ನಂತರದ ತೊಂದರೆಗಳನ್ನು ಎದುರಿಸಲು ಆಯುರ್ವೇದ, ಯೋಗ ಮತ್ತು ಇತರ ವಿಧಾನಗಳು ಇಡೀ ಜಗತ್ತಿಗೆ ತುಂಬಾ ಸಹಕಾರಿಯಾಗಲಿವೆ ಎಂದು ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ (ಸ್ವತಂತ್ರ) ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಆಯುಷ್ ಸಚಿವಾಲಯ ಜಂಟಿಯಾಗಿ ಆರಂಭಿಸಿರುವ ರಾಷ್ಟ್ರೀಯ ಚಿಕಿತ್ಸಾ ಮಾರ್ಗಸೂಚಿಯಲ್ಲಿ ಆಯುರ್ವೇದವನ್ನು ಸೇರಿಸಲಾಗಿದೆ ಎಂದು ಸರಣಿ ಟ್ವೀಟ್ ಗಳಲ್ಲಿ  ಅವರು ತಿಳಿಸಿದ್ದಾರೆ. 

ಭಾರತ, ಕೋವಿಡ್-19 ಸಂದರ್ಭದಲ್ಲಿ  ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ, ಇದರ ಜೊತೆಗೆ ಅಂತಾರಾಷ್ಟ್ರೀಯ ಪ್ರಯತ್ನಗಳ ಮೂಲಕ ಬೆಂಬಲವೂ ಅಗತ್ಯವಾಗಿದೆ. ಕೋವಿಡ್-19ರಿಂದ ಗುಣಮುಖರಾಗಿ ನಂತರವೂ ತೊಂದರೆಗಳು ಬಾಧಿಸಿದರೆ ಇಡೀ ವಿಶ್ವಕ್ಕೆ  ಆಯುರ್ವೇದ, ಯೋಗ ಮತ್ತು ಆಯುಷ್ ನ ಪದ್ಧತಿಗಳು ತುಂಬಾ ಸಹಾಯಕವಾಗುತ್ತವೆ ಎಂಬ ವಿಶ್ವಾಸ ತಮಗಿದೆ ಎಂದಿದ್ದಾರೆ.

ಆರೋಗ್ಯ ಮತ್ತು ಕಾಯಿಲೆ ಮತ್ತು ವೆಚ್ಚದ ಪರಿಣಾಮಕಾರಿತ್ವದ ಬಗೆಗಿನ ಸಮಗ್ರ ವಿಧಾನದಿಂದಾಗಿ ಆಯುರ್ವೇದ ಮತ್ತು ಇತರ ಸಾಂಪ್ರದಾಯಿಕ ಔಷಧ ವಿಧಾನಗಳು ರೋಗವನ್ನು ಆರಂಭದಲ್ಲೇ ತಡೆಯುವುದರೊಂದಿಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಲ್ಲಿ ನೆರವಾಗಲಿವೆ. ಸಾಂಕ್ರಾಮಿಕ ರೋಗದ ನಂತರ ಉಂಟಾಗುವ ಮಾನಸಿಕ ಮತ್ತು ಭಾವನಾತ್ಮಕ ಸಮಸ್ಯೆಗಳನ್ನು ಎದುರಿಸಲು ಈ ವಿಧಾನಗಳು ಪರಿಹಾರಗಳನ್ನು ಹೊಂದಿವೆ ಎಂದು ಅವರು ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದ ತೀವ್ರ ಪರಿಣಾಮ, ಸಮಾಜ ಮತ್ತು ಆರೋಗ್ಯ ವ್ಯವಸ್ಥೆಯಲ್ಲಿ ಮೂಲ ಬದಲಾವಣೆಗಳಿಗೆ ಕಾರಣವಾಗಲಿದೆ ಎಂದಿರುವ ಅವರು, ಭವಿಷ್ಯದಲ್ಲಿ ಇಂತಹ ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ತಡೆಗಟ್ಟುವಿಕೆ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವ ಹೊಸ ಮಾದರಿಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT