ಎನ್ಕೌಂಟರ್ ನಡೆದ ಸ್ಥಳದಲ್ಲಿ ಭದ್ರತಾಪಡೆಗಳು 
ದೇಶ

ನಗ್ರೋಟಾ ಎನ್ಕೌಂಟರ್: ಹತ್ಯೆಯಾದ ಉಗ್ರರು ಪಾಕಿಸ್ತಾನ ಉಗ್ರ ಸಂಘಟನೆಯ ನಾಯಕರೊಂದಿಗೆ ನಂಟು ಹೊಂದಿದ್ದರು!

ನಗ್ರೋಟಾ ಎನ್ಕೌಂಟರ್'ನಲ್ಲಿ ಬಲಿಯಾದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಉಗ್ರರೂ ಪಾಕಿಸ್ತಾನ ಉಗ್ರ ಸಂಘಟನೆಯ ನಾಯಕರು ಹಾಗೂ ಸೇನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ. 

ನವದೆಹಲಿ: ನಗ್ರೋಟಾ ಎನ್ಕೌಂಟರ್'ನಲ್ಲಿ ಬಲಿಯಾದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಉಗ್ರರೂ ಪಾಕಿಸ್ತಾನ ಉಗ್ರ ಸಂಘಟನೆಯ ನಾಯಕರು ಹಾಗೂ ಸೇನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ. 

ಎನ್ಕೌಂಟರ್ ನಡೆದ ಸ್ಧಳದಲ್ಲಿ ಭದ್ರತಾಪಡೆಗಳು ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವಸ್ತುಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ಹೇಳಲಾಗುತ್ತಿದೆ. 

ಘಟನಾ ಸ್ಥಳದಲ್ಲಿ ಸೇನಾಪಡೆಗಳು ಮೊಬೈಲ್ ಹ್ಯಾಂಡ್'ಸೆಟ್ (ಎಂಪಿಡಿ 2505 ಮಾದರಿ), ಡಿಜಿಟಲ್ ರೇಡಿಯೋ ಮತ್ತು ಪಾಕಿಸ್ತಾನಿ ಸಿಮ್ ಕಾರ್ಡ್'ಗಳು ವೈರ್'ಲೆಸ್ ಸೆಟ್, ಜಿಪಿಎಸ್ ಡಿವೈಸ್, ಪಾಕ್ ನಿರ್ಮಿತ ಶೂಗಳು ಇವೆ. ಕರಾಚಿ ನಿರ್ಮಿತ ಔಷದಗಳೂ ಸಿಕ್ಕಿವೆ. ಮೊಬೈಲ್ ಫೋನ್'ಗೆ ಬಂದಿರುವ ಸಂದೇಶ ಇವುಗಳನ್ನೆಲ್ಲ ಗಮನಿಸಿದರೆ ಪಾಕ್ ಕೈವಾಡವಿರುವುದು ಕಂಡು ಬಂದಿದೆ. 

ಈ ನಡುವೆ ಭದ್ರತಾ ಪಡೆಗಳಿಗೆ ಸಿಕ್ಕಿರುವ ಫೋನ್'ನಲ್ಲಿ ಕೆಲ ಸಂದೇಶಗಳೂ ಕೂಡ ಕಂಡು ಬಂದಿವೆ. ಎಲ್ಲಿಗೆ ತಲುಪಿದ್ರಿ, ಹೇಗಿದೆ ಅಲ್ಲಿನ ಪರಿಸ್ಥಿತಿ, ಇದೂವರೆಗೂ ಯಾವ ತೊಂದರೆ ಆಗಿಲ್ಲ ಎಂದು ಭಾವಿಸುತ್ತೇನೆಂದು ಹೇಳಿರುವ ಕಂಡು ಬಂದಿದೆ. ಇದಕ್ಕೆ ಉಗ್ರರು ಪ್ರತಿಕ್ರಿಯೆ ನೀಡಿ, ಇದೂವರೆಗೆ ತೊಂದರೆಯಾಗಿಲ್ಲ. 2 ಗಂಟೆಗೆ ತಲುಪಿದ್ವಿ, ಆ ಮೇಲೆ ಎಲ್ಲಾ ವಿಚಾರವನ್ನು ತಿಳಿಸುತ್ತೇವೆಂದು ಹೇಳಿರುವ ಸಂದೇಶಗಳು ಕಾಣಿಸಿವೆ. 

ಕಳೆದ ಗುರುವಾರವಷ್ಟೇ ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್'ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು. 

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT