ದೇಶ

ರಾಜಕೀಯ ತೊರೆದು ಆತ್ಮಹತ್ಯೆಗೆ ಸಿದ್ಧ, ಬಿಜೆಪಿಗೆ ಸೇರಲಾರೆ: ಸೌಗತ ರಾಯ್

ಪಶ್ಚಿಮ ಬಂಗಾಳದ ಕನಿಷ್ಠ ಐವರು ತೃಣಮೂಲ ಕಾಂಗ್ರೆಸ್ ಸಂಸದರು ಪಕ್ಷಕ್ಕೆ ರಾಜಿನಾಮೆಕೊಟ್ಟು , ಬಿಜೆಪಿಗೆ ಬರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ಟಿಎಂಸಿ ಸಂಸದ ಸೌಗತ ರಾಯ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕನಿಷ್ಠ ಐವರು ತೃಣಮೂಲ ಕಾಂಗ್ರೆಸ್ ಸಂಸದರು ಪಕ್ಷಕ್ಕೆ ರಾಜಿನಾಮೆಕೊಟ್ಟು , ಬಿಜೆಪಿಗೆ ಬರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ಟಿಎಂಸಿ ಸಂಸದ ಸೌಗತ ರಾಯ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸಂಸದ ಅರ್ಜುನ್ ಸಿಂಗ್ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿ ಟಿಎಂಸಿ ಪಕ್ಷದ ಅನುಭವಿ, ಸೌಗತ ರಾಯ್ ಸೇರಿದಂತೆ ದೊಡ್ಡ ನಾಯಕರೇ ಯಾವುದೇ ಕ್ಷಣದಲ್ಲಿ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಬರಬಹುದು ಎಂದೂ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದರು . 

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಸೌಗತ ರಾಯ್, ಇದೊಂದು ಬಿಜೆಪಿ ಪ್ರಚಾರದ ಕಲೆ. ಅರ್ಜುನ್ ಸಿಂಗ್ ಈ ರೀತಿ ಆರೋಪಿಸುವುದರಲ್ಲಿ ಪ್ರಸಿದ್ಧ ಬಾಹುಬಲಿ. ನಾನು ರಾಜಕೀಯ ತೊರೆದು ಸಾಯಲು ಸಿದ್ಧ ಆದರೆ, ಎಂದಿಗೂ ಬಿಜೆಪಿಗೆ ಸೇರುವುದಿಲ್ಲ ಅವರ ಜೊತೆ . ಕೈ ಜೋಡಿಸುವುದಿಲ್ಲ. ಮೇಲಾಗಿ ನಾನು ಮಾರಾಟವಾಗುವ ಸರಕು ಅಲ್ಲ ಎಂದೂ ಅವರು ಪ್ರತ್ಯುತ್ತರ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT