ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ.

ತಿರುವಂತಪುರ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ. 

ಶಿಕ್ಷೆ ವಿಧಿಸಲು ಅವಕಾಶವಿರುವ ಸುಗ್ರೀವಾಜ್ಞೆಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಸಹಿ ಹಾಕಿದ್ದಾರೆ. 

ಅಪರಾಧಕ್ಕೆ ಪ್ರೇರೇಪಿಸುವ ಅಥವಾ ಯಾರಿಗಾದರೂ ಬೆದರಿಕೆಯೊಡ್ಡುವ ಸಂದೇಶವನ್ನು ಯಾವುದೇ ಮಾಧ್ಯಮದ ಮೂಲಕ ಸಿದ್ಧಪಡಿಸುವುದು, ಕಳಿಸುವುದು, ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಇಂಥವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹ 10,000 ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಕೇರಳ ಪೊಲೀಸ್ ಕಾಯ್ದೆಗೆ ಹೊಸದೊಂದು ಪರಿಚ್ಛೇದ (118 A) ಸೇರಿಸುವ ಈ ವಿಧಿಗೆ ಕೇರಳ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಈ ಕಾನೂನು ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕಲು ಬಳಕೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದ್ದು, ಹೊಸ ಕಾನೂನಿಗೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಆದರ, ಕಾನೂನನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಮರ್ಥಿಸಿಕೊಂಡಿದ್ದಾರೆ. 

ಸಾಮಾಜಿಕ ಮಾಧ್ಯಮಗಳಲ್ಲಿ ವೈಯಕ್ತಿಕ ನಿಂದನೆ ಹೆಚ್ಚಾಗುತ್ತಿದೆ. ಈ ಪ್ರವೃತ್ತಿಗೆ ಕಡಿವಾಣ ಹಾಕಲು ಕಾನೂನು ಬೇಕಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT