ಭೂಮಿಗೆ ಅಪ್ಪಳಿಸಲು ಪ್ರಾರಂಭಿಸಿದ ನಿವಾರ್ ಚಂಡಮಾರುತ: ಗಾಳಿಯ ವೇಗ ಗಂಟೆಗೆ 145 ಕಿ.ಮೀ 
ದೇಶ

ಭೂಮಿಗೆ ಅಪ್ಪಳಿಸಲು ಪ್ರಾರಂಭಿಸಿದ ನಿವಾರ್ ಚಂಡಮಾರುತ: ಗಾಳಿಯ ವೇಗ ಗಂಟೆಗೆ 145 ಕಿ.ಮೀ

ನಿವಾರ್ ಚಂಡಮಾರುತ ಸಮುದ್ರದಿಂದ ಭೂಪ್ರದೇಶಕ್ಕೆ ಅಪ್ಪಳಿಸಲು ಪ್ರಾರಂಭವಾಗಿದೆ.

ಚೆನ್ನೈ: ನಿವಾರ್ ಚಂಡಮಾರುತ ಸಮುದ್ರದಿಂದ ಭೂಪ್ರದೇಶಕ್ಕೆ ಅಪ್ಪಳಿಸಲು ಪ್ರಾರಂಭವಾಗಿದೆ.

ಚೆನ್ನೈ ನ ಐಎಂಡಿ ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ ಚಂಡಮಾರತದ ಕೇಂದ್ರ ಅಥವಾ ಕಣ್ಣು ಈಗ ಮರಕ್ಕಣಂ ದಾಟಿದ್ದು ಇನ್ನು ಮೂರು ಗಂಟೆಗಳ ಅವಧಿಯಲ್ಲಿ ಪುದುಚೆರಿಯನ್ನು ದಾಟಲಿದ್ದು ಗಾಳಯ ವೇಗ ಪ್ರತಿ ಗಂಟೆಗೆ 120-130 ಕಿ.ಮೀ ವೇಗದಲ್ಲಿ ದಾಟಲಿದ್ದು ಪ್ರತಿ ಗಂಟೆಗೆ 145 ಕಿ. ಮಿ ವರೆಗೂ ತಲುಪಲಿದೆ.

ಚಂಡಮಾರುತ ಸಮುದ್ರ ಪ್ರದೇಶದಿಂದ ಭೂ ಪ್ರದೇಶಕ್ಕೆ ಅಪ್ಪಳಿಸುತ್ತಿದ್ದಂತೆಯೇ ವಿಲ್ಲುಪುರಂ ಸೇರಿದಂತೆ ಹಲವೆಡೆ  ಕುಂಭದ್ರೋಣ ಮಳೆ ಪ್ರಾರಂಭವಾಗಿದ್ದು ವಿದ್ಯುತ್ ಪೂರೈಕೆಯೂ ವ್ಯತ್ಯಯವಾಗಿದೆ.

ಚಂಡಮಾರುತದ ಪರಿಸ್ಥಿತಿ ನಿಭಾಯಿಸುವುದಕ್ಕಾಗಿ ಎನ್ ಡಿಆರ್ ಎಫ್ ಈಗಾಗಲೇ ಹಲವು ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಾಚರಣೆಗಳಲ್ಲಿ ಈ ತಂಡಗಳು ತೊಡಗಲಿವೆ.

ತಮಿಳುನಾಡಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದ್ದು, ಪಾಂಡಿಚೆರಿಗಳಲ್ಲಿ 1,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT