ಲಾಲೂ ಪ್ರಸಾದ್ ಯಾದವ್ 
ದೇಶ

ಜೈಲಿನಿಂದಲೇ ಬಿಹಾರ ಸರ್ಕಾರ ಕೆಡವಲು ಲಾಲೂ ಪ್ರಸಾದ್ ಸಂಚು: ಸುಶೀಲ್ ಮೋದಿ ಆರೋಪ

ಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪಾಟ್ನಾ: ಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎನ್ ಡಿ ಎ ಶಾಸಕರನ್ನು ಖರೀದಿಸಿ, ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಹೊಸ ಸರ್ಕಾರವನ್ನು ಉರುಳಿಸಲು ಲಾಲು ಪ್ರಸಾದ್ ಯಾದವ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಹೀಗೆ ಶಾಸಕರನ್ನು ಖರೀದಿಸಿ, ಮಹಾಘಟ್ ಬಂಧನ್ ಗೆ ನೆರವಾಗಲು ಲಾಲೂ ಪ್ರಸಾದ್ ಪ್ರಯತ್ನಿಸುತ್ತಿದ್ದಾರೆ ಎಂದು ಸುಶೀಲ್ ಮೋದಿ ಆರೋಪಿಸಿದ್ದಾರೆ.

“8051216302” ದೂರವಾಣಿ ಸಂಖ್ಯೆಯಿಂದ ಲಾಲೂ ಪ್ರಸಾದ್ ಯಾದವ್ ಎನ್‌ಡಿಎ ಶಾಸಕರಿಗೆ ಕರೆ ಮಾಡುತ್ತಿದ್ದಾರೆ. ಸಚಿವ ಸ್ಥಾನ ಖಚಿತ  ಎಂದು ಭರವಸೆ ನೀಡುತ್ತಿದ್ದಾರೆ. ನಾನು ದೂರವಾಣಿ ಮಾಡಿದಾಗ ಲಾಲು ಪ್ರಸಾದ್ ಯಾದವ್ ಫೋನ್ ಎತ್ತಿಕೊಂಡರು. ಜೈಲಿನಿಂದ ಇಂತಹ  ಚಿಲ್ಲರೆ ರಾಜಕೀಯ ಮಾಡಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಈ ಪ್ರಯತ್ನದಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ಕೂಡಾ ನಾನು ಲಾಲೂಗೆ ಹೇಳಿದ್ದೇನೆ ಎಂದು ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಮೇವು ಹಗರಣದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ತಮ್ಮ ಪ್ರಭಾವವನ್ನೇನು   ಕಳೆದುಕೊಂಡಿಲ್ಲ. ಅವರು ಎನ್ ಡಿ ಎ ಶಾಸಕರನ್ನು ಖರೀದಿಸಿದರೂ ಯಾರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಮೋದಿ ಹೇಳಿದ್ದಾರೆ.

ರಾಂಚಿಯಿಂದ ಲಾಲು ಪ್ರಸಾದ್ ಯಾದವ್ ಎನ್‌ಡಿಎ ಶಾಸಕರಿಗೆ ಫೋನ್ ಕರೆ ಮಾಡುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನದ ಆಮಿಷವೊಡ್ಡುತ್ತಿದ್ದಾರೆ ಎಂದು ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT