ಹುಲಿ ದಾಳಿ 
ದೇಶ

ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರನ್ನು ಅಟ್ಟಾಡಿಸಿದ ಹುಲಿ, ಇಬ್ಬರಿಗೆ ಗಾಯ!

ಅಸ್ಸಾಂ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿನ ಹುಲಿಯೊಂದು ಸಮೀಪದ ಗ್ರಾಮಕ್ಕೆ ನುಗ್ಗಿದ್ದು, ಇಡೀ ಗ್ರಾಮಸ್ಥರನ್ನು ಅಟ್ಟಾಡಿಸಿದೆ.

ತೇಜ್ ಪುರ: ಅಸ್ಸಾಂ ಕಾಜಿರಂಗ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿನ ಹುಲಿಯೊಂದು ಸಮೀಪದ ಗ್ರಾಮಕ್ಕೆ ನುಗ್ಗಿದ್ದು, ಇಡೀ ಗ್ರಾಮಸ್ಥರನ್ನು ಅಟ್ಟಾಡಿಸಿದೆ.

ಹೌದು..ಕಾಜಿರಂಗ ಅರಣ್ಯ ಪ್ರದೇಶಕ್ಕೆ ಸಮೀಪದಲ್ಲೇ ಇರುವ ತೇಜ್ ಪುರ ವಿಶ್ವ ವಿದ್ಯಾಲಯದ ಸಮೀಪದ ನಾಪಮ್ ಪ್ರದೇಶಕ್ಕೆ ನುಗ್ಗಿದ್ದ ಹುಲಿಯೊಂದು ಇಲ್ಲಿನ ನಿವಾಸಿಗಳನ್ನು ಅಟ್ಟಾಡಿಸಿದ್ದು, ಈ ವೇಳೆ ಇಬ್ಬರು ಗ್ರಾಮಸ್ಥರಿಗೆ ಗಾಯಗಳಾಗಿವೆ.

ಹುಲಿ ಗ್ರಾಮಕ್ಕೆ ಬಂದು ಅಲ್ಲಿ ದೈನಂದಿನ ಕೆಲಸ ಕಾರ್ಯಕ್ಕೆ ತೆರಳುತ್ತಿದ್ದವರ ಮೇಲೆ ಏಕಾಏಕಿ ಎರಗಿದೆ. ಹುಲಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಗ್ರಾಮಸ್ಥರು ದಿಕ್ಕಾಪಾಲಾಗಿ ಓಡಿದ್ದು ಈ ವೇಳೆ ಇಬ್ಬರಿಗೆ ಗಾಯಗಳಾಗಿವೆ. ವಿಚಾರ ತಿಳಿಯುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಹುಲಿಯ  ಮಾರ್ಗವನ್ನು ಮರಳಿಸಿದ್ದಾರೆ. ಅಲ್ಲದೆ ಹುಲಿಯ ಗ್ರಾಮದ ಸಮೀಪಕ್ಕೆ ತೆರಳದಂತೆ ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಅರಣ್ಯಕ್ಕೆ ಮರಳುವಂತೆ ಅದರ ಮಾರ್ಗಗಳನ್ನು ಬಂದ್ ಮಾಡಿದ್ದಾರೆ. ಅಂತೆಯೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶೀಘ್ರದಲ್ಲೇ ಹುಲಿಯನ್ನು ಕಾಡಿಗೆ ಅಟ್ಟುವುದಾಗಿ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಹುಲಿ ಗ್ರಾಮಸ್ಥರನ್ನು ಅಟ್ಟಾಡಿಸಿರುವ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT