ಮರಗಳು ಬಿದ್ದಿರುವ ಜಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗಳು 
ದೇಶ

ನಿವಾರ್ ಚಂಡಮಾರುತ: ಭಾರೀ ಮಳೆಗೆ ಚೆನ್ನೈನಲ್ಲಿ 5 ಸಾವು, 80ಕ್ಕೂ ಹೆಚ್ಚು ಮರಗಳು ಧರೆಗೆ

ಭಾರಿ ಮಳೆ ಮತ್ತು ತೀವ್ರ ಗಾಳಿಯೊಂದಿಗೆ ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರುಗುರುಳಿರುವುದಾಗಿ ವರದಿಗಳಿಂದ ತಿಳಿದುಬಂದಿದೆ. 

ಚೆನ್ನೈ: ಭಾರಿ ಮಳೆ ಮತ್ತು ತೀವ್ರ ಗಾಳಿಯೊಂದಿಗೆ ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರುಗುರುಳಿರುವುದಾಗಿ ವರದಿಗಳಿಂದ ತಿಳಿದುಬಂದಿದೆ. 

ಚಂಡಮಾರುತದಿಂದ ಭಾರೀ ಮಳೆ ಶುರುವಾಗಿದೆ ಎಂದು ಚೆನ್ನೈನ ಹವಾಮಾನ ಇಲಾಖೆ ಅಧಿಕಾರಿ ಎಸ್ ಬಾಲಚಂದ್ರನ್ ಹೇಳಿದ್ದಾರೆ.

ಚಂಡಮಾರುತ ಸದ್ಯ, ಕಡಲೂರಿನ ಪೂರ್ವ-ಆಗ್ನೇಯಕ್ಕೆ 50 ಕಿ.ಮೀ ಮತ್ತು ಪುದುಚೇರಿಯ ಪೂರ್ವ ಆಗ್ನೇಯಕ್ಕೆ ಸುಮಾರು 40 ಕಿ.ಮೀ.ದೂರದಲ್ಲಿದೆ.

ಬುಧವಾರ ರಾತ್ರಿಯೇ ನಿವಾಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು. ತಮುಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದುಹೋಗಲಿದೆ. ಈ ವೇಳೆಗೆ ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ. 

ಹೀಗಾಗಿ ಯಾರೂ ಕೂಡ ಮೀನುಗಾರಿಕೆ, ಮೋಟರ್ ಬೋಟ್ಸ್ ಸೇರಿ ಇನ್ನಿತರ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಮಳೆಯಾಗುತ್ತಿದ್ದು, ಚಂಡಮಾರುತದ ಹಿನ್ನೆಲೆಯಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. 

ಈ ನಡುವೆ ಚಂಡಮಾರುತದ ಸವಾಲುಗಳನ್ನು ಎದುರಿಸಲು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ. ಮತ್ತೊಂದೆಡೆ ಆಂಧ್ರಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT