ಸಂಸದ ತೇಜಸ್ವಿ ಸೂರ್ಯ 
ದೇಶ

ಹೈದರಾಬಾದ್: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಒಸ್ಮಾನಿಯಾ ವಿಶ್ವವಿದ್ಯಾಲಯ ದೂರು ದಾಖಲು

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್ ನ ಒಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಕೇಸು ದಾಖಲಿಸಿದೆ. ಭಾರತೀಯ ದಂಡಸಂಹಿತೆ ಸೆಕ್ಷನ್ 447ರಡಿಯಲ್ಲಿ ಅಪರಾಧ ಅತಿಕ್ರಮಣ ಕೇಸನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನೀಡಿರುವ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ. 

ಹೈದರಾಬಾದ್: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್ ನ ಒಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಕೇಸು ದಾಖಲಿಸಿದೆ. ಭಾರತೀಯ ದಂಡಸಂಹಿತೆ ಸೆಕ್ಷನ್ 447ರಡಿಯಲ್ಲಿ ಅಪರಾಧ ಅತಿಕ್ರಮಣ ಕೇಸನ್ನು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನೀಡಿರುವ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ. 

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಸಂಬಂಧ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ಹೈದರಾಬಾದ್ ಗೆ ಬಂದಿದ್ದ ಸಂಸದ ತೇಜಸ್ವಿ ಸೂರ್ಯ, ವಿಶ್ವವಿದ್ಯಾಲಯದ ಎನ್ ಸಿಸಿ ಗೇಟ್ ಬಳಿ ಹಾಕಲಾಗಿದ್ದ ತಡೆಯನ್ನು ತಮ್ಮ ಬೆಂಬಲಿಗರೊಂದಿಗೆ ಭೇದಿಸಿ ಒಳನುಗ್ಗಿದ್ದಾರೆ ಎಂದು ಆಡಳಿತ ಮಂಡಳಿ ಆರೋಪಿಸಿದೆ.

ನಂತರ ತೇಜಸ್ವಿ ಸೂರ್ಯ ಕಲಾ ಕಾಲೇಜಿನಲ್ಲಿ ಭಾಷಣ ಮಾಡಿದ್ದರು.ವಿಶ್ವವಿದ್ಯಾಲಯ ರೆಜಿಸ್ಟ್ರಾರ್ ಡಾ ಸಿ ಎಚ್ ಗೋಪಾಲ್ ರೆಡ್ಡಿ, ಕಾರ್ಯಕ್ರಮ ನಡೆಸಲು ಅವರಿಗೆ ಅನುಮತಿಯಿರಲಿಲ್ಲ. ವಿಶ್ವವಿದ್ಯಾಲಯದಲ್ಲಿ ಇಂತಹ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಉಪ ಕುಲಪತಿಗಳ ಆದೇಶದ ಮೇರೆಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT