ವಿ ನಾರಾಯಣಸ್ವಾಮಿ 
ದೇಶ

'ನಿವಾರ್' ಮಧ್ಯಂತರ ಪರಿಹಾರಕ್ಕಾಗಿ ಕೇಂದ್ರದಿಂದ 50 ಕೋಟಿ ರೂ. ಕೇಳಿದ ಪುದುಚೆರಿ ಸರ್ಕಾರ

ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಅವುಗಳನ್ನು ಸರಿಪಡಿಸುವುದಕ್ಕಾಗಿ ಪುದುಚೆರಿ ಸರ್ಕಾರ ಕೇಂದ್ರ ಸರ್ಕಾರದಿಂದ 50 ರೂಪಾಯಿ ಮಧ್ಯಂತರ ಪರಿಹಾರ ನಿಧಿಗೆ ಮನವಿ ಮಾಡುವ ಸಾಧ್ಯತೆ ಇದೆ.

ಪುದುಚೆರಿ: ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಅವುಗಳನ್ನು ಸರಿಪಡಿಸುವುದಕ್ಕಾಗಿ ಪುದುಚೆರಿ ಸರ್ಕಾರ ಕೇಂದ್ರ ಸರ್ಕಾರದಿಂದ 50 ರೂಪಾಯಿ ಮಧ್ಯಂತರ ಪರಿಹಾರ ನಿಧಿಗೆ ಮನವಿ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಸಿಎಂ ವಿ ನಾರಾಯಣ ಸ್ವಾಮಿ ಮಾಹಿತಿ ನೀಡಿದ್ದು, ಹಾನಿಯ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತಿದೆ. ಅಂದಾಜು 400 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರಬಹುದು ಎಂದು ನಾರಾಯಣಸ್ವಾಮಿ ತಿಳಿಸಿದ್ದಾರೆ.

ಆರಂಭಿಕ ಅಂದಾಜಿನಲ್ಲಿ 820 ಹೆಕ್ಟೇರ್ ಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ಭತ್ತ, 700 ಹೆಕ್ಟೇರ್ ಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ತರಕಾರಿಗಳು, 170 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, 55 ಹೆಕ್ಟೇರ್ ಗಳಷ್ಟು ಪ್ರದೇಶದ್ಲಲಿ ಬೆಳೆದಿದ್ದ ಬಾಳೆ ಹಾಗೂ 7 ಹೆಕ್ಟೇರ್ ಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ವೀಳ್ಯದ ಎಲೆಗಳ ಫಸಲು ನಾಶವಾಗಿರುವುದಷ್ಟೇ ಅಲ್ಲದೇ ರಸ್ತೆಗಳು, ಮೀನುಗಾರಿಕಾ ಬೋಟ್ ಗಳೂ ಸಹ ನಷ್ಟವಾಗಿದೆ.

ಜಲಾವೃತಗೊಂಡ ಪ್ರದೇಶದಿಂದ ಶೇ.95 ರಷ್ಟು ನೀರನ್ನು ಹೊರಹಾಕಲಾಗಿದೆ. ವಿದ್ಯುತ್ ಕಡಿತಗೊಂಡಿದ್ದ ಪ್ರದೇಶಗಳ ಪೈಕಿ ಶೇ.90 ಭಾಗಗಳಲ್ಲಿ ವಿದ್ಯುತ್ ಪೂರೈಕೆ ಪುನಾರಂಭಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT