ವಿ ನಾರಾಯಣಸ್ವಾಮಿ 
ದೇಶ

'ನಿವಾರ್' ಮಧ್ಯಂತರ ಪರಿಹಾರಕ್ಕಾಗಿ ಕೇಂದ್ರದಿಂದ 50 ಕೋಟಿ ರೂ. ಕೇಳಿದ ಪುದುಚೆರಿ ಸರ್ಕಾರ

ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಅವುಗಳನ್ನು ಸರಿಪಡಿಸುವುದಕ್ಕಾಗಿ ಪುದುಚೆರಿ ಸರ್ಕಾರ ಕೇಂದ್ರ ಸರ್ಕಾರದಿಂದ 50 ರೂಪಾಯಿ ಮಧ್ಯಂತರ ಪರಿಹಾರ ನಿಧಿಗೆ ಮನವಿ ಮಾಡುವ ಸಾಧ್ಯತೆ ಇದೆ.

ಪುದುಚೆರಿ: ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಅವುಗಳನ್ನು ಸರಿಪಡಿಸುವುದಕ್ಕಾಗಿ ಪುದುಚೆರಿ ಸರ್ಕಾರ ಕೇಂದ್ರ ಸರ್ಕಾರದಿಂದ 50 ರೂಪಾಯಿ ಮಧ್ಯಂತರ ಪರಿಹಾರ ನಿಧಿಗೆ ಮನವಿ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಸಿಎಂ ವಿ ನಾರಾಯಣ ಸ್ವಾಮಿ ಮಾಹಿತಿ ನೀಡಿದ್ದು, ಹಾನಿಯ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತಿದೆ. ಅಂದಾಜು 400 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರಬಹುದು ಎಂದು ನಾರಾಯಣಸ್ವಾಮಿ ತಿಳಿಸಿದ್ದಾರೆ.

ಆರಂಭಿಕ ಅಂದಾಜಿನಲ್ಲಿ 820 ಹೆಕ್ಟೇರ್ ಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ಭತ್ತ, 700 ಹೆಕ್ಟೇರ್ ಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ತರಕಾರಿಗಳು, 170 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, 55 ಹೆಕ್ಟೇರ್ ಗಳಷ್ಟು ಪ್ರದೇಶದ್ಲಲಿ ಬೆಳೆದಿದ್ದ ಬಾಳೆ ಹಾಗೂ 7 ಹೆಕ್ಟೇರ್ ಗಳಷ್ಟು ಪ್ರದೇಶದಲ್ಲಿ ಬೆಳೆದಿದ್ದ ವೀಳ್ಯದ ಎಲೆಗಳ ಫಸಲು ನಾಶವಾಗಿರುವುದಷ್ಟೇ ಅಲ್ಲದೇ ರಸ್ತೆಗಳು, ಮೀನುಗಾರಿಕಾ ಬೋಟ್ ಗಳೂ ಸಹ ನಷ್ಟವಾಗಿದೆ.

ಜಲಾವೃತಗೊಂಡ ಪ್ರದೇಶದಿಂದ ಶೇ.95 ರಷ್ಟು ನೀರನ್ನು ಹೊರಹಾಕಲಾಗಿದೆ. ವಿದ್ಯುತ್ ಕಡಿತಗೊಂಡಿದ್ದ ಪ್ರದೇಶಗಳ ಪೈಕಿ ಶೇ.90 ಭಾಗಗಳಲ್ಲಿ ವಿದ್ಯುತ್ ಪೂರೈಕೆ ಪುನಾರಂಭಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT