ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆ 
ದೇಶ

ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆ 

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ರಕ್ಷಣಾ ಕಾರ್ಯದರ್ಶಿಗಳನ್ನೂ ಭೇಟಿ ಮಾಡಿರುವ ಅಜಿತ್ ದೋವಲ್, ಪ್ರಾದೇಶಿಕವಾಗಿ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಸಂಬಂಧ ಮಹತ್ವದ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ  ಮಾಲ್ಡೀವ್ಸ್, ಲಂಕಾ, ಭಾರತದ ತ್ರಿಪಕ್ಷೀಯ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯನ್ನು ಲಂಕಾ ಆಯೋಜಿಸಿದ್ದು ಈ ಸಭೆಯಲ್ಲಿ ದೋವಲ್ ಭಾಗಿಯಾಗಲಿದ್ದಾರೆ. ಕಡಲ ಭದ್ರತಾ ಸಹಕಾರದ ಕುರಿತು ಸಭೆಯಲ್ಲಿ ಮಹತ್ವದ ಮಾತುಕತೆ ನಡೆಯುವ ನಿರೀಕ್ಷೆ ಇದೆ.

6 ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಸಭೆಯ ಬಳಿಕ ಇದೇ ಮೊದಲ ಬಾರಿಗೆ ಕಡಲ ಭದ್ರತಾ ಸಹಕಾರದ ಸಭೆ ಆಯೋಜನೆಯಾಗುತ್ತಿದೆ. ಅಜಿತ್ ದೋವಲ್ ವರ್ಷದಲ್ಲಿ ಎರಡನೇ ಬಾರಿಗೆ ಲಂಕಾಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಜನವರಿಯಲ್ಲಿ ದೋವಲ್ ಲಂಕಾಗೆ ಭೇಟಿ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT