ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆ 
ದೇಶ

ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆ 

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 

ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ರಕ್ಷಣಾ ಕಾರ್ಯದರ್ಶಿಗಳನ್ನೂ ಭೇಟಿ ಮಾಡಿರುವ ಅಜಿತ್ ದೋವಲ್, ಪ್ರಾದೇಶಿಕವಾಗಿ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ಸಂಬಂಧ ಮಹತ್ವದ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ  ಮಾಲ್ಡೀವ್ಸ್, ಲಂಕಾ, ಭಾರತದ ತ್ರಿಪಕ್ಷೀಯ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯನ್ನು ಲಂಕಾ ಆಯೋಜಿಸಿದ್ದು ಈ ಸಭೆಯಲ್ಲಿ ದೋವಲ್ ಭಾಗಿಯಾಗಲಿದ್ದಾರೆ. ಕಡಲ ಭದ್ರತಾ ಸಹಕಾರದ ಕುರಿತು ಸಭೆಯಲ್ಲಿ ಮಹತ್ವದ ಮಾತುಕತೆ ನಡೆಯುವ ನಿರೀಕ್ಷೆ ಇದೆ.

6 ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಸಭೆಯ ಬಳಿಕ ಇದೇ ಮೊದಲ ಬಾರಿಗೆ ಕಡಲ ಭದ್ರತಾ ಸಹಕಾರದ ಸಭೆ ಆಯೋಜನೆಯಾಗುತ್ತಿದೆ. ಅಜಿತ್ ದೋವಲ್ ವರ್ಷದಲ್ಲಿ ಎರಡನೇ ಬಾರಿಗೆ ಲಂಕಾಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಜನವರಿಯಲ್ಲಿ ದೋವಲ್ ಲಂಕಾಗೆ ಭೇಟಿ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

U19 ಏಷ್ಯಾ ಕಪ್ ಫೈನಲ್‌: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳ

SCROLL FOR NEXT