ಸಿಂಗು ಗಡಿಭಾಗದಲ್ಲಿ ಇಂದು ಸೇರಿರುವ ರೈತರು 
ದೇಶ

ದೆಹಲಿಯ ಸಿಂಗು, ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಜಮಾವಣೆ: ಉತ್ತರ ದೆಹಲಿಯತ್ತ ಹೋಗಲು ಪ್ರತಿಭಟನಾಕಾರರು ನಕಾರ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ ಭಾಗದ ರೈತರ ಪ್ರತಿಭಟನೆ ಮುಂದುವರಿದಿದ್ದು, ರೈತರು ದೇಶದ ರಾಜಧಾನಿ ದೆಹಲಿಗೆ ಸಮೀಪಿಸುತ್ತಿದ್ದಂತೆ ಪರಿಸ್ಥಿತಿ ಬಿಗಡಾಯಿಸಿದೆ. ವಾಹನ ಸವಾರರು ಸಂಚಾರ ದಟ್ಟಣೆ, ಬದಲಿ ಸಂಚಾರ ಮಾರ್ಗಗಳನ್ನು ಪೊಲೀಸರು ಕಲ್ಪಿಸಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ನವದೆಹಲಿ: ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ಮಂದಿ ರೈತರು ಶನಿವಾರ ಸಿಂಗು ಗಡಿಯಲ್ಲಿ ಜಮಾಯಿಸಿದ್ದು, ತೀವ್ರ ಪೊಲೀಸ್ ಭದ್ರತೆಯ ನಡುವೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. 

ಪೊಲೀಸರು ಉತ್ತರ ದೆಹಲಿಯ ಸ್ಥಳವೊಂದರಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಿದರೂ ಕೂಡ ಇಂದು ಬೆಳಗ್ಗೆ ಸೇರಿರುವ ಟಿಕ್ರಿ ಗಡಿಭಾಗದ ಮೈದಾನದಲ್ಲಿಯೇ ಮುಂದುವರಿಸಿದ್ದಾರೆ.ಅಲ್ಲಿಂದ ಪ್ರತಿಭಟನಾಕಾರರು ಮುಂದುವರಿಯುತ್ತಾರೆಯೇ, ಇಲ್ಲವೇ ಎಂಬುದು ಇನ್ನು ಕೆಲ ಹೊತ್ತುಗಳಲ್ಲಿ ನಿರ್ಧಾರವಾಗಲಿದೆ.

ಪಂಜಾಬ್ ನಗರಕ್ಕೆ ಹೋಗುವ ಮುಖ್ಯ ಗಡಿಯಾದ ಸಿಂಗು ಗಡಿಯಲ್ಲಿ ರೈತರೊಬ್ಬರು ಮಾತನಾಡಿ, ತಾವು ಮುಂದುವರಿಯದೆ ಇಲ್ಲಿಯೇ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.

ನಾವು ಸಿಂಗು ಗಡಿಯಿಂದ ಕದಲುವುದಿಲ್ಲ, ನಮ್ಮ ಹೋರಾಟವನ್ನು ಇಲ್ಲಿಯೇ ಮುಂದುವರಿಸುತ್ತಿದ್ದು ಮನೆಗೂ ಹಿಂತಿರುಗಿ ಹೋಗುವುದಿಲ್ಲ. ಪಂಜಾಬ್ ಮತ್ತು ಹರ್ಯಾಣಗಳಿಂದ ಸಾವಿರಾರು ರೈತರು ಬಂದಿದ್ದಾರೆ ಎಂದರು.

ಪಂಜಾಬ್ ಭಾಗದ ರೈತರ ಪ್ರತಿಭಟನೆ ಮುಂದುವರಿದಿದ್ದು, ರೈತರು ದೇಶದ ರಾಜಧಾನಿ ದೆಹಲಿಗೆ ಸಮೀಪಿಸುತ್ತಿದ್ದಂತೆ ಪರಿಸ್ಥಿತಿ ಬಿಗಡಾಯಿಸಿದೆ. ವಾಹನ ಸವಾರರು ಸಂಚಾರ ದಟ್ಟಣೆ, ಬದಲಿ ಸಂಚಾರ ಮಾರ್ಗಗಳನ್ನು ಪೊಲೀಸರು ಕಲ್ಪಿಸಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ದೆಹಲಿ ಮತ್ತು ಎನ್ ಸಿಆರ್ ನಗರಗಳ ಮಧ್ಯೆ ವಾಹನ ಸಂಚಾರ ತೀವ್ರ ಅಡಚಣೆಯುಂಟಾಗಿದೆ. ಎನ್ ಸಿಆರ್, ಕೇಂದ್ರ ದೆಹಲಿ, ಪಂಜಾಬಿ ಬಾಗ್, ನೈರುತ್ಯ ಮತ್ತು ಆಗ್ನೇಯ ದೆಹಲಿಗಳಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಹರ್ಯಾಣದ ಗಡಿಭಾಗದ ಸಿಂಗು, ಟಿಕ್ರಿ, ಧನ್ಸ, ಜಾರೊಡ ಕಲನ್ ಗಳಲ್ಲಿ ಪೊಲೀಸರು ಸಂಚಾರ ಬಂದ್ ಮಾಡಿದ್ದಾರೆ.

ಇಂದು ಬೆಳಗ್ಗೆ ಸದ್ಯ ರೈತರು ಟಿಕ್ರಿ ಭಾಗದಲ್ಲಿ ಪ್ರತಿಭಟನೆ ನಡೆಸಲು ಸೇರಿದ್ದು ಅಲ್ಲಿನ ಬುರಾರಿ ಪ್ರದೇಶದ ನಿರಂಕಾರಿ ಸಮಾಗಮ ಮೈದಾನದಲ್ಲಿ ಪ್ರದರ್ಶನ ನಡೆಸಲು ರೈತರಿಗೆ ಅನುಮತಿ ನೀಡಲಾಗಿದೆ. ಅಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಆದರೆ ಅಲ್ಲಿಗೆ ಹೋಗಲು ರೈತರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT