ಆರ್ಷಿಯಾ-ನೂರುಲ್ಲಾ 
ದೇಶ

ಗರ್ಭಿಣಿ ಅತ್ತಿಗೆ ಅಂತಲೂ ನೋಡದೆ ಪತಿಯ ತಮ್ಮಂದಿರಿಂದ ಕಿರುಕುಳ, ಮನನೊಂದು ಗೃಹಿಣಿ ಆತ್ಮಹತ್ಯೆ!

ಮದುವೆಯಾಗಿ ಒಂದು ವರ್ಷದಲ್ಲೇ ತಾನು ತಾಯಿಯಾಗುತ್ತಿರುವ ಖುಷಿ ಅನುಭವಿಸಬೇಕಿದ್ದ ಗೃಹಿಣಿಯೊಬ್ಬರು ಗಂಡ ಮತ್ತು ಆತನ ಸಹೋದರರ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಹೈದರಾಬಾದ್: ಮದುವೆಯಾಗಿ ಒಂದು ವರ್ಷದಲ್ಲೇ ತಾನು ತಾಯಿಯಾಗುತ್ತಿರುವ ಖುಷಿ ಅನುಭವಿಸಬೇಕಿದ್ದ ಗೃಹಿಣಿಯೊಬ್ಬರು ಗಂಡ ಮತ್ತು ಆತನ ಸಹೋದರರ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಆರ್ಷಿಯಾ ಎಂದು ಗುರುತಿಸಲಾಗಿದೆ. ಆರ್ಷಿಯಾ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಆಕೆಯನ್ನು 2019ರ ನವೆಂಬರ್ ನಲ್ಲಿ ಹಿಂದೂಪುರದ ಆರ್ಟಿಸಿ ಕಾಲೋನಿಯ ಸಾಫ್ಟ್ ವೇರ್ ಉದ್ಯೋಗಿ ನೂರುಲ್ಲಾಗೆ ಮದುವೆ ಮಾಡಿಕೊಟ್ಟಿದ್ದರು. 

ಮಗಳು ಸುಖವಾಗಿರಲೆಂದು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದು ಅಲ್ಲದೆ 5 ಲಕ್ಷ ವರದಕ್ಷಿಣ ಮತ್ತು ಅರ್ಧ ಕೆಜಿ ಚಿನ್ನಾಭರಣವನ್ನು ಸಹ ನೀಡಿದ್ದರು. ಆದರೆ ಇಷ್ಟಕ್ಕೆ ತೃಪ್ತಿಯಾಗ ನೂರುಲ್ಲಾ ವರದಕ್ಷಿಣೆ ಮತ್ತು ಕಾರು ತರುವಂತೆ ಕಿರುಕುಳ ನೀಡುತ್ತಿದ್ದರು. ಇದೇ ಅಲ್ಲದೆ ಅಣ್ಣ ಜೊತೆ ಸೇರಿ ಸಹೋದರರು ಸಹ ಕಿರುಕುಳ ನೀಡಲು ತೊಡಗಿದರು.

ಇನ್ನು ಅರ್ಷಿಯಾ ಗರ್ಭೀಣಿ ಎಂದು ತಿಳಿದ ಮೇಲೆ ನುರೂಲ್ಲಾ ಅನುಮಾನಿಸಲು ಪ್ರಾರಂಭಿಸಿದ್ದಾನೆ. ಇದರಿಂದ ನಿತ್ಯ ಮನೆಯಲ್ಲಿ ಜಗಳವಾಗುತ್ತಿತ್ತು. ಇದರಿಂದ ನೊಂದ ಆರ್ಷಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುದ್ದಿ ತಿಳಿದ ಆರ್ಷಿಯಾ ಪೋಷಕರು ಅಳಿಯ ನೂರುಲ್ಲನ ವಿರುದ್ಧ ದೂರು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!