ರೈತರ ಪ್ರತಿಭಟನೆ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ 
ದೇಶ

ಡಿ.3ಕ್ಕೆ ಮತ್ತೆ ರೈತರನ್ನು ಮಾತುಕತೆಗೆ ಕರೆದ ಕೇಂದ್ರ ಸಚಿವ ತೋಮರ್ 

ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ರೈತರು ರಾಷ್ಟ್ರ ರಾಜಧಾನಿಯಲ್ಲಿ ರೊಚ್ಚಿಗೆದ್ದಿರುವಂತೆಯೇ, ಅವರ ಸಮಸ್ಯೆಗಳನ್ನು ಬಗೆಹರಿಸಲು ಡಿಸೆಂಬರ್ 3ರಂದು ಮತ್ತೆ ರೈತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ಪುನರುಚ್ಚರಿಸಿದ್ದಾರೆ.

ನವದೆಹಲಿ: ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ರೈತರು ರಾಷ್ಟ್ರ ರಾಜಧಾನಿಯಲ್ಲಿ ರೊಚ್ಚಿಗೆದ್ದಿರುವಂತೆಯೇ, ಅವರ ಸಮಸ್ಯೆಗಳನ್ನು ಬಗೆಹರಿಸಲು ಡಿಸೆಂಬರ್ 3ರಂದು ಮತ್ತೆ ರೈತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ಪುನರುಚ್ಚರಿಸಿದ್ದಾರೆ.

ರೈತರ ಏಳಿಗೆಗೆ ಅಗತ್ಯವಾದ ಯಾವುದೇ ಕೆಲಸವನ್ನು ಮಾಡಲು ಸರ್ಕಾರ ಸಿದ್ಧವಿದೆ. ಡಿಸೆಂಬರ್ 3 ರಂದು ಮತ್ತೆ ಮಾತುಕತೆಗೆ ಆಹ್ವಾನಿಸಿದ್ದು, ಅವರು ಬರುವ ವಿಶ್ವಾಸವಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಕನಿಷ್ಠ  ಬೆಂಬಲ ಬೆಲೆಯನ್ನು ಹೆಚ್ಚಿಸಿದ್ದು, ರೈತರಿಗಾಗಿ 1 ಲಕ್ಷ ಕೋಟಿ ಮೂಲಸೌಕರ್ಯ ನಿಧಿಯನ್ನು ಸ್ಥಾಪಿಸಲಾಗಿದೆ ಎಂದು ತೋಮರ್ ಹೇಳಿದ್ದಾರೆ.

ಪ್ರತಿಪಕ್ಷಗಳು ಈ ವಿಚಾರವನ್ನು ರಾಜಕೀಯಗೊಳಿಸುತ್ತಿವೆ ಎಂದು ಆರೋಪಿಸಿದ ಅವರು, ಒಂದು ವೇಳೆ ರಾಜಕೀಯ ಪಕ್ಷಗಳು ರಾಜಕೀಯ ಮಾಡಲು ಬಯಸಿದರೆ ಅವರ ಸ್ವಂತ ಹೆಸರಿನಲ್ಲಿ ಮಾಡಲಿ, ಆದರೆ, ರೈತರ ಹೆಸರಿನಲ್ಲಿ ಮಾಡಬಾರದು ಎಂದರು.

ರೈತರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರ ಫೋಟೊವೊಂದನ್ನು ಕಾಂಗ್ರೆಸ್ ಮುಖಂಡರೊಬ್ಬರು ಫೋಸ್ಟ್ ಮಾಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಕೆಟ್ಟದು ಮತ್ತು ಸುಳ್ಳುಗಳನ್ನು ಹೇಗೆ ರಾಜಕೀಯ ಮಾಡಬೇಕು ಎಂಬುದು ಮಾತ್ರ ಕಾಂಗ್ರೆಸ್ ಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು. 

ಕೇಂದ್ರ ಸರ್ಕಾರ ಸೆಪ್ಟೆಂಬರ್ ತಿಂಗಳಲ್ಲಿ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ಗುರುವಾರ ದಿಂದ ದೆಹಲಿ ಚಲೋ ಪ್ರತಿಭಟನೆಯನ್ನು ರೈತರು ನಡೆಸುತ್ತಿದ್ದಾರೆ. 

ದೆಹಲಿ- ಹರಿಯಾಣ ಗಡಿಯಲ್ಲಿ ಎರಡು ದಿನಗಳ ಕಾಲ ಪೊಲೀಸರು ಮತ್ತು ರೈತರು ನಡುವಣ ಸಂಘರ್ಷ ನಂತರ ಟಿಕ್ರಿ ಗಡಿ ಮೂಲಕ ಶುಕ್ರವಾರ  ದೆಹಲಿ ತಲುಪುವಲ್ಲಿ ಯಶಸ್ವಿಯಾದ ರೈತರಿಗೆ ರಾಷ್ಟ್ರ ರಾಜಧಾನಿಯ ಹೊರವಲಯ ಬುರಾರಿಯಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದು, ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT