ರೈತರ ಪ್ರತಿಭಟನೆ 
ದೇಶ

ಸರ್ಕಾರದ ಮಾತುಕತೆ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು

ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತ ಸಂಘಟನೆಗಳು, ನೇರ ಪರಿಹಾರಕ್ಕೆ ಒತ್ತಾಯಿಸಿವೆ.

ನವದೆಹಲಿ: ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತ ಸಂಘಟನೆಗಳು, ನೇರ ಪರಿಹಾರಕ್ಕೆ ಒತ್ತಾಯಿಸಿವೆ.

ಸರ್ಕಾರವು ರೈತರ ಬೇಡಿಕೆಗಳನ್ನು ಪರಿಹರಿಸುವ ವಿಷಯದಲ್ಲಿ ಗಂಭೀರವಾಗಿದ್ದರೆ, ರೈತರಿಗೆ ಯಾವುದೇ ಷರತ್ತುಗಳನ್ನು ಹಾಕುವುದನ್ನು ನಿಲ್ಲಿಸಬೇಕು (ನೀವು ಬುರಾರಿ ಮೈದಾನಕ್ಕೆ 'ರಚನಾತ್ಮಕ ರೀತಿಯಲ್ಲಿ' ಹೋಗುವುದಾದರೆ ನಾವು ಮರುದಿನ ಮಾತುಕತೆ ಪ್ರಾರಂಭಿಸುತ್ತೇವೆ). ಮಾತುಕತೆಯು ಕಾಯಿದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ವಿವರಣೆ ಮತ್ತು ಅದು ನೀಡುತ್ತಿರುವ ಪರಿಹಾರದ ಪ್ರಸ್ತಾವನೆಯನ್ನು ಹೊಂದಿರಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (ಎಐಕೆಎಸ್ ಸಿಸಿ) ಹೇಳಿಕೆಯಲ್ಲಿ ತಿಳಿಸಿದೆ.

ಕಾರ್ಪೊರೇಟ್ ಹಿತಾಸಕ್ತಿಗಳನ್ನು ಈಡೇರಿಸಲು ಚರ್ಚೆ ಇಲ್ಲದೆ ಜಾರಿಗೆ ತರಲಾದ 3 ರೈತ ವಿರೋಧಿ, ಜನ ವಿರೋಧಿ ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ವಿದ್ಯುತ್ ಮಸೂದೆ 2020 ಅನ್ನು ಹಿಂಪಡೆಯಬೇಕೆಂದು ರೈತರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆಯನ್ನು ತೀವ್ರಗೊಳಿಸಲು ದೆಹಲಿಗೆ ರೈತರು ಬರಬೇಕು ಎಂದು ಎಐಕೆಎಸ್ ಸಿಸಿ ಎಲ್ಲಾ ರೈತ ಸಂಘಟನೆಗಳಿಗೆ ಕರೆ ನೀಡಿದೆ.

ಎಲ್ಲಾ ಕಾರ್ಪೊರೇಟ್ ವಿರೋಧಿ, ರೈತ ಪರ ಸಂಘಟನೆಗಳು ಕೈಜೋಡಿಸಿ ಪ್ರತಿಭಟನೆ ನಡೆಸಬೇಕೆಂದು ಅದು ಕರೆ ನೀಡಿದೆ. 2020 ರ ಡಿಸೆಂಬರ್ 1 ರಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು, ರಾಜ್ಯಮಟ್ಟದಲ್ಲಿಯೂ ಪ್ರತಿಭಟನೆಗೆ ಕರೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT