ಚಂದ್ರಬಾಬು ನಾಯ್ಡು 
ದೇಶ

ಕಲಾಪಕ್ಕೆ ಅಡ್ಡಿ: ಆಂಧ್ರ ವಿಧಾನಸಭೆಯಿಂದ ಚಂದ್ರಬಾಬು ನಾಯ್ಡು, ಇತರ 12 ಶಾಸಕರು ಅಮಾನತು

ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನವೇ ಕಲಾಪಕ್ಕೆ ಅಡ್ಡಿಪಡಿಸಿದ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ ಇತರ 12 ಟಿಡಿಪಿ ಶಾಸಕರನ್ನು ಒಂದು ದಿನ ಅಮಾನತುಗೊಳಿಸಲಾಗಿದೆ.

ವಿಜಯವಾಡ: ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನವೇ ಕಲಾಪಕ್ಕೆ ಅಡ್ಡಿಪಡಿಸಿದ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ ಇತರ 12 ಟಿಡಿಪಿ ಶಾಸಕರನ್ನು ಒಂದು ದಿನ ಅಮಾನತುಗೊಳಿಸಲಾಗಿದೆ.

ಟಿಡಿಪಿ ಸದಸ್ಯೆ ನಿಮ್ಮಲಾ ರಮಾನೈದು ಅವರು ನಿವಾರ್ ಚಂಡಮಾರುತದಿಂದ ಉಂಟಾದ ಹಾನಿ ಮತ್ತು ಪರಿಹಾರ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು, ನಷ್ಟದ ಕುರಿತು ಡಿಸೆಂಬರ್ 15 ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ನಂತರ ಸಬ್ಸಿಡಿ ರೂಪದಲ್ಲಿ ಡಿಸೆಂಬರ್ 31 ರೊಳಗೆ ಪರಿಹಾರವನ್ನು ಪಾವತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಪ್ರತಿಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು ಮೈಕ್ ನೀಡುವಂತೆ ಸ್ಪೀಕರ್ ಗೆ ಒತ್ತಾಯಿಸಲಾಯಿತು. ಆದರೆ ಅವರ ಪಕ್ಷದ ಸದಸ್ಯ ರಮಾನೈದು ಮಾತನಾಡುತ್ತಿರುವುದರಿಂದ ಇದನ್ನು ನಿರಾಕರಿಸಲಾಯಿತು. ಇದರಿಂದಾಗಿ ಟಿಡಿಪಿ ಸದಸ್ಯರು ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಅಲ್ಲದೆ ಇದರಿಂದ ಕೋಪಗೊಂಡ ಚಂದ್ರಬಾಬು ನಾಯ್ಡು ಅವರು ಸ್ಪೀಕರ್ ಕುರ್ಚಿಯ ಮುಂದೆ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

ಚಂದ್ರಬಾಬು ನಾಯ್ಡು ಅವರ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ, ನಾಯ್ಡು ಅವರು ತಮ್ಮ ಪಕ್ಷದ ಸದಸ್ಯರೊಬ್ಬರು ಮಾತನಾಡುತ್ತಿರುವಾಗ ಮಧ್ಯ ಪ್ರವೇಶಿಸಿ ಅಡ್ಡಿಪಡಿಸಲು ಯತ್ನಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು. 

ಪ್ರತಿಭಟನೆ ಕೈಬಿಟ್ಟು ವಾಪಸ್ ಹೋಗಿ ಕುಳಿತುಕೊಳ್ಳಿ ಎಂದು ಸ್ಪೀಕರ್ ಪದೇಪದೆ ಮನವಿ ಮಾಡಿದರೂ ಒಪ್ಪದ ಚಂದ್ರಬಾಬು ನಾಯ್ಡು ಹಾಗೂ ಇತರೆ 12 ಶಾಸಕರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT