ದೇವ್ ದೀಪಾವಳಿ ಉದ್ಟಾಟಿಸಿದ ಪ್ರಧಾನಿ ಮೋದಿ 
ದೇಶ

ವಾರಾಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ, ಮನಸೆಳೆದ ದೀಪಾಲಂಕಾರ

ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿಯ ರಾಜ್ ಘಾಟ್ ನಲ್ಲಿ  ದೇವ್ ದೀಪಾವಳಿ ಮಹೋತ್ಸವನ್ನು ಉದ್ಘಾಟಿಸಿ, ಮೊದಲ ದೀಪವನ್ನು ಹಚ್ಚಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಾರಾಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿಯ ರಾಜ್ ಘಾಟ್ ನಲ್ಲಿ  ದೇವ್ ದೀಪಾವಳಿ ಮಹೋತ್ಸವನ್ನು ಉದ್ಘಾಟಿಸಿ, ಮೊದಲ ದೀಪವನ್ನು ಹಚ್ಚಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ತಿಕಾ ಮಾಸದ ಹುಣ್ಣಿಮೆ ಆಚರಣೆ ಅಂಗವಾಗಿ ಗಂಗಾ ನದಿಯ ದಡದಲ್ಲಿ 15 ಲಕ್ಷ  ದೀಪಗಳನ್ನು ಬೆಳಗಲಾಯಿತು. ಸಾಂಪ್ರದಾಯಿಕ ನೃತ್ಯಗಾರರು ನೃತ್ಯ ಪ್ರದರ್ಶಿಸಿದರು.

ದೀಪಾವಳಿ ನಂತರ ಆಚರಿಸುವ ದೇವ್ ದೀಪಾವಳಿಯಲ್ಲಿ ಗಂಗಾ ನದಿ ದಡದಲ್ಲಿ ದೊಡ್ಡ ಪ್ರಮಾಣದಲ್ಲಿ ದೀಪಗಳನ್ನು ಬೆಳಗಲಾಯಿತು. ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಮತ್ತು ಯೋಗಿ ಆದಿತ್ಯನಾಥ್  ದೇವ್ ದೀಪಾವಳಿ ಮಹೋತ್ಸವಕ್ಕಾಗಿ ರಾಜ್ ಘಾಟ್ ತಲುಪಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ವಾರಾಣಾಸಿಯನ್ನು ವರ್ಣರಂಜಿತವಾಗಿ ಆಲಂಕರಿಸಲಾಗಿತ್ತು.

ದೇವ್ ದೀಪಾವಳಿ ಪ್ರಯುಕ್ತ ಗಂಗಾ ನದಿಯ 15 ಘಾಟ್ಸ್ ಗಳಲ್ಲಿ ದೀಪಾಲಂಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT