ರಾಹುಲ್ ಗಾಂಧಿ 
ದೇಶ

ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿಯಿಂದ ಅ. 4 ರಿಂದ 6 ರವರೆಗೆ ಟ್ರಾಕ್ಟರ್ ರ್ಯಾಲಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.

ಚಂಡೀಗಢ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರ ವರೆಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ರಾಹುಲ್ ಗಾಂಧಿ ನಿರ್ಧರಿಸಿದ್ದರು ಎಂದು ಪಕ್ಷ ಹೇಳಿದೆ.

"ರಾಹುಲ್ ಗಾಂಧಿ ಅವರ ಟ್ರಾಕ್ಟರ್ ರ್ಯಾಲಿ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅಕ್ಟೋಬರ್ 4, 5, 6ಕ್ಕೆ ಮರು ನಿಗದಿಪಡಿಸಲಾಗಿದೆ. ಉಳಿದ ವಿವರ ಮೊದಲಿನಂತೆಯೇ ಇದೆ" ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್ ಮಾಡಿದ್ದಾರೆ.

ಟ್ರಾಕ್ಟ್ ರ್ಯಾಲಿಯಲ್ಲಿ ಅಮರಿಂದರ್ ಸಿಂಗ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಜಖರ್, ಪಕ್ಷದ ಪಂಜಾಬ್ ಉಸ್ತುವಾರಿ ಹರೀಶ್ ರಾವತ್, ಮತ್ತು ಎಲ್ಲಾ ರಾಜ್ಯ ಸಚಿವರು ಮತ್ತು ಪಕ್ಷದ ಶಾಸಕರು ಪಾಲ್ಗೊಳ್ಳಲಿದ್ದಾರೆ. "ರೈತರ ಹೋರಾಟಕ್ಕೆ ಬೆಂಬಲ ನೀಡಲು ಮತ್ತು ಅವರ ನೋವಿಗೆ ಧ್ವನಿಯಾಲು ಕಾಂಗ್ರೆಸ್ ಈ ಪ್ರತಿಭಟನಾ ರ್ಯಾಲಿ ಆಯೋಜಿಸಿದೆ ತುಕ್ರಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!