ರಾಹುಲ್ ಗಾಂಧಿ 
ದೇಶ

'ಎಂದಿಗೂ 'ತಲೆಬಾಗುವುದಿಲ್ಲ': ಗಾಂಧೀ ಜಯಂತಿ ಹಿನ್ನೆಲೆ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ರಾಹುಲ್ ಹೇಳಿಕೆ

ಅನ್ಯಾಯ ಮಾಡುವವರ ಎದುರು ಎಂದಿಗೂ ತಲೆಬಾಗುವುದಿಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ನವದೆಹಲಿ: ಅನ್ಯಾಯ ಮಾಡುವವರ ಎದುರು ಎಂದಿಗೂ ತಲೆಬಾಗುವುದಿಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟಲ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಪ್ರಪಂಚದಲ್ಲಿ ನಾನು ಯಾರಿಗೂ ಹೆದರುವುದಿಲ್ಲ. ಅನ್ಯಾಯದ ವಿರುದ್ಧ ಯಾರೊಬ್ಬರ ಮುಂದೆಯೂ ತಲೆಬಾಗುವುದಿಲ್ಲ. ಅಸತ್ಯವನ್ನು ಸತ್ಯದಿಂದ ಗೆಲ್ಲುತ್ತನೆ. ಅಸತ್ಯ ವಿರೋಧಿಸುವಾಗ ಎಲ್ಲಾ ನೋವುಗಳನ್ನು ನಾನು ಸಹಿಸಿಕೊಳ್ಳಬಲ್ಲೆ ಎಂದು ಹೇಳಿದ್ದಾರೆ. 

ಉತ್ತರಪ್ರದೇಶದ ಹತ್ರಾಸ್ ನಲ್ಲಿ ಅತ್ಯಾಚಾರಿಗಳಿಗೆ ಬಲಿಯಾದ 19 ವರ್ಷದ ದಲಿತ ಯುವತಿಯ ಕುಟುಂಬಸ್ಥರನ್ನು ಭೇಟಿಯಾಗಲು ನಿನ್ನೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಉತ್ತರಪ್ರದೇಶಕ್ಕೆ ಹೊರಟಿದ್ದರು. 

ಈ ವೇಳೆ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್'ಪ್ರೆಸ್ ವೇ ಬಳಿ ರಾಹುಲ್, ಪ್ರಿಯಾಂಕ್ ಅವರ ವಾಹನಗಳನ್ನು ಪೊಲೀಸರು ತಡೆದಿದ್ದರು. ಈ ವೇಳೆ ಪಕ್ಷದ ಕಾರ್ಯಕರ್ತರ ಜೊತೆಗೂಡಿದ ರಾಹುಲ್ ಮತ್ತು ಪ್ರಿಯಾಂಕಾ ನಡೆದುಕೊಂಡೇ ಹೆದ್ದಾರಿಯಲ್ಲಿ ಹೊರಟ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದು, ಜೀಪಿನಲ್ಲಿ ಕರೆದೊಯ್ದು ಗೆಸ್ಟ್ ಹೌಸ್ ವೊಂದರಲ್ಲಿ ಇಟ್ಟಿದ್ದರು. ಕೆಲ ಹೊತ್ತಿನ ಬಳಿಕ ಬಿಡುಗಡೆ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT