ಗಲ್ವಾನ್ ಹುತಾತ್ಮ ಯೋಧರಿಗಾಗಿ ಹೊಸ ಯುದ್ಧ ಸ್ಮಾರಕ ನಿರ್ಮಾಣ 
ದೇಶ

ಗಲ್ವಾನ್ ಹುತಾತ್ಮ ಯೋಧರಿಗಾಗಿ ಹೊಸ ಯುದ್ಧ ಸ್ಮಾರಕ ನಿರ್ಮಾಣ 

ಗಲ್ವಾನ್ ನಲ್ಲಿ ಚೀನಾ ಗಡಿ ಅತಿಕ್ರಮಣವನ್ನು ತಡೆಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಯೋಧರ ಸ್ಮರಣಾರ್ಥ ಯುದ್ಧ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. 

ಲಡಾಖ್: ಗಲ್ವಾನ್ ನಲ್ಲಿ ಚೀನಾ ಗಡಿ ಅತಿಕ್ರಮಣವನ್ನು ತಡೆಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಯೋಧರ ಸ್ಮರಣಾರ್ಥ ಯುದ್ಧ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. 

ಡರ್ಬುಕ್-ಷ್ಯೋಕ್-ದೌಲತ್ ಬೇಗ್ ಓಲ್ಡೀ, ಲಡಾಖ್ ನ ಕೆಎಂ-120 ಪೋಸ್ಟ್ ನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ಅಲ್ಲಿ 20 ಹುತಾತ್ಮ ಯೋಧರ ಹೆಸರನ್ನು ಘಟನೆ ಸಹಿತ ಬರೆಯಲಾಗಿದೆ. 

"ಜೂ.15, 2020 ರಂದು ಗಲ್ವಾನ್ ಕಣಿವೆಯಲ್ಲಿ ಕರ್ನಲ್ ಸಂತೋಷ್ ಬಾಬು, ಕಮಾಂಡಿಂಗ್ ಅಧಿಕಾರಿ, 16 ಬಿಹಾರ್ ಅವರು 16 ಬಿಹಾರ್ ಕ್ವಿಕ್ ರಿಯಾಕ್ಷನ್ ಫೋರ್ಸ್ ನ್ನು ಮುನ್ನಡೆಸಿ ಪಾಯಿಂಟ್ 14 ರಿಂದ ಮುಂದೆ ಬರುವ ಪಿಎಲ್ಎಯ ಯತ್ನವನ್ನು ತಡೆಗಟ್ಟಿದ್ದರು. ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಪಿಪಿ 14 ರ ಬಳಿ ಪಿಎಲ್ಎ ಸೈನಿಕರು ಮುಂದೆ ಬಂದಾಗ ಘರ್ಷಣೆ ಉಂಟಾಗಿದ್ದು, ಪಿಎಲ್ಎ ಯತ್ನವನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ಯೋಧರು ಧೈರ್ಯದಿಂದ ಹೋರಾಡಿದ್ದರು. ಈ ಕಾರ್ಯಾಚರಣೆಯಲ್ಲಿ ಸಾವು-ನೋವುಗಳು ಸಂಭವಿಸಿ, ಯೋಧರು ಹುತಾತ್ಮರಾಗಿದ್ದಾರೆಂದು" ಸ್ಮಾರಕದ ಮೇಲೆ ಘಟನಾ ವಿವರಗಳನ್ನು ನೀಡಲಾಗಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ