ರೈತರ ಜಮೀನು ರಕ್ಷಿಸಿ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ 
ದೇಶ

ಮೋದಿ ಸರ್ಕಾರ ಅಂಬಾನಿ, ಅದಾನಿಯಂತ ದೊಡ್ಡ ಉದ್ಯಮಿಗಳ ನಿಯಂತ್ರಣದಲ್ಲಿದೆ: ರಾಹುಲ್ ಗಾಂಧಿ ಆರೋಪ

ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನು ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ, ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬದ್ನಿ ಕಲನ್(ಪಂಜಾಬ್): ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನು ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ, ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅವರು ಇಂದು ಪಂಜಾಬ್ ನ ಮೊಗ ಜಿಲ್ಲೆಯ ಬದ್ನಿ ಕಲನ್ ನಿಂದ ಜತ್ಪುರಕ್ಕೆ ಟ್ರಾಕ್ಟರ್ ಮೆರವಣಿಗೆ ಮೂಲಕ ರೈತರ ಭೂಮಿ ರಕ್ಷಿಸುವ ಯಾತ್ರೆಗೆ ಚಾಲನೆ ನೀಡಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ಸೇರಿದಂತೆ ಕೃಷಿ ವಲಯದ ಸುಧಾರಣೆ ಮಸೂದೆಗಳನ್ನು ವಿರೋಧಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನ ಈ ದೇಶದ ರೈತರ ಜೀವನಕ್ಕೆ ಕಪ್ಪು ಚುಕ್ಕೆಯಾದ ಮಸೂದೆಗಳನ್ನು ತೆಗೆದುಹಾಕಿ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂಬ ಭರವಸೆಯನ್ನು ನಾನು ಈ ಸಂದರ್ಭದಲ್ಲಿ ಕೊಡುತ್ತೇನೆ. ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆಯಿಂದ ಸಂತೋಷ, ತೃಪ್ತಿ ಹೊಂದಿದ್ದರೆ ದೇಶಾದ್ಯಂತ ಇಂದು ರೈತರು ಏಕೆ ಪ್ರತಿಭಟನೆ ಮಾಡುತ್ತಿದ್ದರು? ಪಂಜಾಬ್ ನಲ್ಲಿ ಪ್ರತಿಯೊಬ್ಬ ರೈತರೂ ಏಕೆ ವಿರೋಧಿಸುತ್ತಿದ್ದರು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗ, ಅದರಿಂದ ಜನರು ಕಷ್ಟಪಡುತ್ತಿರುವ ಸಮಯದಲ್ಲಿ ತರಾತುರಿಯಿಂದ ಈ ಮಸೂದೆಯನ್ನು ತರುವ ಅಗತ್ಯವೇನಿತ್ತು, ನಿಮಗೆ ಮಸೂದೆಯನ್ನು ಜಾರಿಗೆ ತರಬೇಕೆಂದಿದ್ದರೆ ಲೋಕಸಭೆ, ರಾಜ್ಯಸಭೆಗಳಲ್ಲಿ ಸಮಗ್ರವಾಗಿ ಚರ್ಚಿಸಿ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಪರವಾಗಿ ಕಾನೂನು ರೂಪಿಸಬೇಕಾಗಿತ್ತು. ಅದು ಬಿಟ್ಟು ಸದನದಲ್ಲಿ ಮುಕ್ತವಾಗಿ ಚರ್ಚೆ ನಡೆಸದೆ ಆತುರವಾಗಿ ಮಂಡಿಸಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ಮೋದಿ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಮತ್ತು ಆಹಾರ ಸಂಗ್ರಹಣೆಗೆ ಇತಿಶ್ರೀ ಹಾಡಲು ನೋಡುತ್ತಿದೆ ಎಂದು ಕೂಡ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT