ಸಂಜಯ್ ಸಿಂಗ್ 
ದೇಶ

ಹತ್ರಾಸ್: ದಲಿತ ಸಂತ್ರಸ್ತೆ ಕುಟುಂಬಸ್ಥರ ಭೇಟಿ ವೇಳೆ ಆಪ್ ಸಂಸದನ ಮೇಲೆ ಮಸಿ ಎರಚಿದ ವ್ಯಕ್ತಿ

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ದಲಿತ ಯುವತಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ಉತ್ತರ ಪ್ರದೇಶದ ಹತ್ರಾಸ್ ತೆರಳಿದ್ದ ಆಮ್ ಅದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಸಿ ಎರಚಲಾಗಿದೆ.

ಹತ್ರಾಸ್: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ದಲಿತ ಯುವತಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ಉತ್ತರ ಪ್ರದೇಶದ ಹತ್ರಾಸ್ ತೆರಳಿದ್ದ ಆಮ್ ಅದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಸಿ ಎರಚಲಾಗಿದೆ.

ಹತ್ರಾಸ್ ಗೆ ಪಕ್ಷದ ನಿಯೋಗ ಕರೆದೊಯ್ಯುತ್ತಿದ್ದ ಸಂಜಯ್ ಸಿಂಗ್ ಮೇಲೆ ದುಷ್ಕರ್ಮಿಯೊಬ್ಬ ಮಸಿ ಎರಚಿದ್ದು, ಅದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಸಿಂಗ್ ಅವರು ಮಾತನಾಡುವ ವೇಳೆ, ವ್ಯಕ್ತಿಯೊಬ್ಬ ಅವರ ಬಟ್ಟೆಯ ಮೇಲೆ ಮಸಿ ಎರಚಿದ್ದು, ‘ಪಿಎಫ್‌ಐ ದಲಾಲ್ ವಾಪಸ್ ಜಾವ್’ ಎಂದು ಕೂಗಿದ್ದಾನೆ. ಘಟನೆಯ ನಂತರ ಸಿಂಗ್ ಅವರು ತಮ್ಮ ಕಾರಿನಲ್ಲಿ ಸ್ಥಳದಿಂದ ನಿರ್ಗಮಿಸಿದ್ದಾರೆ.

ಕೆಲವು ಪ್ರತಿಭಟನೆಗಳಿಗೆ ಪಿಎಫ್‌ಐ(ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ) ಆರ್ಥಿಕ ನೆರವು ನೀಡುತ್ತಿದೆ ಎಂದು ಆರೋಪಿಸಲಾಗಿದೆ. ಈ ಸಂಘಟನೆಯನ್ನು ನಿಷೇಧಿಸಬೇಕು ಎಂದು ಉತ್ತರ ಪ್ರದೇಶದ ಪೊಲೀಸರು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT