ಹತ್ರಾಸ್ ಘಟನೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಎಐಎಸ್ಎ ಮತ್ತು ಸಮಾಜವಾದಿ ಪಕ್ಷದ ಕಾರ್ಯಕರ್ತರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿರುವುದು. 
ದೇಶ

ಹತ್ರಾಸ್ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅತ್ಯಗತ್ಯ; ಅಪಪ್ರಚಾರ ನಡೆಯುತ್ತಿದೆ: 'ಸುಪ್ರೀಂ'ಗೆ ಯೋಗಿ ಸರ್ಕಾರ

ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ. 

ನವದೆಹಲಿ: ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ. 

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು ಇಂದು ಸಿಜೆಐ ಎಸ್.ಎ. ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. 

ಪ್ರಕರಣವನ್ನು ಸ್ವತಂತ್ರ ಕೇಂದ್ರ ಸಂಸ್ಥೆ ತನಿಖೆ ನಡೆಸುವುದು ಅತ್ಯಗತ್ಯವಿದೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ತಿಳಿಸಿದೆ. 

ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಅಡಚಣೆಗಳನ್ನು ದೂರಾಗಿಸುವ ಸಲುವಾಗಿ ಸಿಬಿಐ ತನಿಖೆ ನಡೆಸಲು ಅನುಮತಿ ನೀಡುವಂತೆ ಕೇಂದ್ರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ. ಸಿಬಿಐ ತನಿಖೆ ನಡೆಸುವುದರಿಂದ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಉದ್ದೇಶ, ಲಾಭಗಳೊಂದಿಗೆ ನಕಲಿ ಮತ್ತು ಸುಳ್ಳು ನಿರೂಪಣೆಯನ್ನು ರಚಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT