ದಿಲೀಪ್ ರೇ 
ದೇಶ

ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ: ನ್ಯಾಯಾಲಯ ತೀರ್ಪು

1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ರಾಂಚಿ: 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಈ ತೀರ್ಪಿತ್ತಿದ್ದಾರೆ. ರೇ ಅವರು ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿದ್ದರು.

ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್  ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್ಎಲ್) ಗೆ ಸಹ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ. 

ಈ ಪ್ರಕರಣವು ಜಾರ್ಖಂಡ್‌ನ ಗಿರಿದಿಹ್ ‌ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆ ಮಾಡಿದ್ದರ ಬಗೆಗೆ ಸಂಬಂಧ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT