ದಿಲೀಪ್ ರೇ 
ದೇಶ

ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ: ನ್ಯಾಯಾಲಯ ತೀರ್ಪು

1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ರಾಂಚಿ: 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಈ ತೀರ್ಪಿತ್ತಿದ್ದಾರೆ. ರೇ ಅವರು ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿದ್ದರು.

ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್  ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್ಎಲ್) ಗೆ ಸಹ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ. 

ಈ ಪ್ರಕರಣವು ಜಾರ್ಖಂಡ್‌ನ ಗಿರಿದಿಹ್ ‌ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆ ಮಾಡಿದ್ದರ ಬಗೆಗೆ ಸಂಬಂಧ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT