ದಿಲೀಪ್ ರೇ 
ದೇಶ

ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅಪರಾಧಿ: ನ್ಯಾಯಾಲಯ ತೀರ್ಪು

1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ರಾಂಚಿ: 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.

ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಈ ತೀರ್ಪಿತ್ತಿದ್ದಾರೆ. ರೇ ಅವರು ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರೇ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿದ್ದರು.

ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್  ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್ಎಲ್) ಗೆ ಸಹ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

ಅಕ್ಟೋಬರ್ 14 ರಂದು ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ. 

ಈ ಪ್ರಕರಣವು ಜಾರ್ಖಂಡ್‌ನ ಗಿರಿದಿಹ್ ‌ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆ ಮಾಡಿದ್ದರ ಬಗೆಗೆ ಸಂಬಂಧ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?