ಸಾಂದರ್ಭಿಕ ಚಿತ್ರ 
ದೇಶ

ಸಿಆರ್ ಪಿಎಫ್ ಮೇಲೆ ಸೋಮವಾರ ನಡೆದ ದಾಳಿ ಹಿಂದೆ ಎಲ್ಇಟಿ ಕೈವಾಡ

ಅ.05 ರಂದು ಸಿಆರ್ ಪಿಎಫ್ ರಸ್ತೆ ಉದ್ಘಾಟನಾ ಕಾರ್ಯಕ್ರಮದ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಶ್ರೀನಗರ: ಅ.05 ರಂದು ಸಿಆರ್ ಪಿಎಫ್ ರಸ್ತೆ ಉದ್ಘಾಟನಾ ಕಾರ್ಯಕ್ರಮದ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.

ನೌಗಾಮ್ ಪ್ರದೇಶದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಉಗ್ರರು ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದರು ಈ ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳು ಹುತಾತ್ಮರಾಗಿದ್ದರು ಮೂವರು ತೀವ್ರವಾಗಿ ಗಾಯಗೊಂಡಿದ್ದರು

ನಾವು ಈ ದಾಳಿಯ ಹಿಂದೆ ಇರುವ ಉಗ್ರರನ್ನು ಗುರುತಿಸಿದ್ದೇವೆ. ಅವರು ಲಷ್ಕರ್ ಸಂಘಟನೆಗೆ ಸೇರಿದವರಾಗಿದ್ದು ಸೈಫುಲ್ಲಾ ಎಂಬ ಪಾಕಿ ಭಯೋತ್ಪಾದಕನ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಅವರನ್ನು ಶೀಘ್ರವೇ ಹೆಡೆಮುರಿಕಟ್ಟಲಾಗುವುದು ಎಂದು ಕಾಶ್ಮೀರ ಝೋನ್ ನ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ. 

ಇಬ್ಬರು ಉಗ್ರರು ದ್ವಿಚಕ್ರವಾಹನದಲ್ಲಿ ಬಂದು ಎ.ಕೆ ರೈಫಲ್ ನಿಂದ ಗುಂಡು ಹಾರಿಸಿದ್ದರು. ಇದೇ ಮಾದರಿಯಲ್ಲಿ ಲಷ್ಕರ್ ಉಗ್ರಸಂಘಟನೆ ಬದ್ಗೌಮ್ ನ ಚಡೂರಾ ಪ್ರದೇಶದಲ್ಲಿ ದಾಳಿ ನಡೆಸಿ ಸಿಆರ್ ಪಿಎಫ್ ನ ಸಬ್ ಇನ್ಸ್ಪೆಕ್ಟರ್ ನ್ನು ಹತ್ಯೆ ಮಾಡಿತ್ತು ಎಂದೂ ಐಜಿಪಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT