ಸುಪ್ರೀಂ ಕೋರ್ಟ್ 
ದೇಶ

ಮಹದಾಯಿ ವಿವಾದ: ಕರ್ನಾಟಕದ ವಿರುದ್ಧ ಗೋವಾದಿಂದ ಸುಪ್ರೀಂ ಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ

ಕರ್ನಾಟಕವು ಮಹದಾಯಿ ನದಿ ನೀರನ್ನು ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂದು ಆರೋಪದ ಮೇಲೆ ಗೋವಾ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ. 

ಪಣಜಿ: ಕರ್ನಾಟಕವು ಮಹದಾಯಿ ನದಿ ನೀರನ್ನು ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂದು ಆರೋಪದ ಮೇಲೆ ಗೋವಾ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

ಗೋವಾದ ಜೀವನಾಡಿಯೆಂದು ಪರಿಗಣಿಸಲ್ಪಟ್ಟ ಮಹದಾಯಿ ನದಿಯ ನೀರನ್ನು ಹಂಚಿಕೊಳ್ಳುವ ವಿವಾದ ಎರಡೂರಾಜ್ಯಗಳ ನಡುವೆ ಸಾಕಷ್ಟು ದೊಡ್ಡ ವ್ಯಾಜ್ಯಕ್ಕೆ ಕಾರಣವಾಗಿದೆ.

ಅನುಮತಿಯಿಲ್ಲದೆ ನದಿ ನೀರನ್ನು ಬೇರೆಡೆಗೆ ತಿರುಗಿಸಲು ಕರ್ನಾಟಕ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಗೋವಾ ಆರೋಪಿಸಿದೆ.

ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಮಹದಾಯಿ ದಿ ನೀರನ್ನು ಹಂಚುವ ಕುರಿತು 2018 ರಲ್ಲಿ ಅಂತರ ರಾಜ್ಯ ಜಲ ವಿವಾದ ನ್ಯಾಯಮಂಡಳಿ ತನ್ನ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಮೂರು ರಾಜ್ಯಗಳೂ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು.

ಸೋಮವಾರ ಈ ಸಂಬಂಧ ಗೋವಾ ಸಿಎಂಸಾವಂತ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೋವಾ ಮತ್ತು ಇತರರ ವಿರೋಧದ ಹೊರತಾಗಿಯೂ  ಕರ್ನಾಟಕವು ನೀರನ್ನು ಬೇರೆಡೆಗೆ ತಿರುಗಿಸಿದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ದಾವೆ ಹೂಡಲಾಗಿದೆ ಎಂದಿದ್ದರು.  ಮಂಗಳವಾರ ಈ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

"ನಾವು ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು  ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದೇವೆ. ಕರ್ನಾಟಕ ನದಿ ನೀರನ್ನು ತಿರುಗಿಸಿದ್ದಕ್ಕೆ ವಿಡಿಯೋ ಸಾಕ್ಷ್ಯಗಳು ಸೇರಿದಂತೆ ಅನೇಕ ದಾಖಲೆಗಳನ್ನು ಕೊಡಲಾಗಿದೆ" ಎಂದು ಅವರು ಹೇಳಿದ್ದಾರೆ. ಏತನ್ಮಧ್ಯೆ, ಮಹಾದಾಯಿ ನೀರು ತಿರುಗಿಸುವ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿರುವ ತನ್ನದೇ ನಾಯಕರನ್ನು ವಜಾಗೊಳಿಸಬೇಕೆಂದು ಗೋವಾ ಶಿವಸೇನೆ ಘಟಕ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT